ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ನಾಮಪತ್ರ ಸಲ್ಲಿಕೆ

ಮಾಂಜರಿ 15: ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಸಾಹೇಬ ಜೊಲ್ಲೆಯವರು ಚುನಾವಣಾಧಿಕಾರಿ ರಾಹುಲ ಶಿಂಧೆಯವರಿಗೆ ನಾಮಪತ್ರ ಸಲ್ಲಿಸಿದರು.  

ಬಳಿಕ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆಯವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅಣ್ಣಾಸಾಹೇಬ ಜೊಲ್ಲೆ ಈಗಾಗಲೇ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಸಭೆ ಮಾಡಲಾಗಿದೆ. ಬಿಜೆಪಿಯಲ್ಲಿ ಯಾವುದೇ ಭಿನ್ನಾಪ್ರಯವಿಲ್ಲ. ಲೋಕಸಭಾ ಕ್ಷೇತ್ರದ 5 ಜನ ಕಾಂಗ್ರೆಸ್ ಶಾಸಕರಿದ್ದರೂ ನಮ್ಮಗೆ ಯಾವುದೇ ಸಮಸ್ಯೆ ಇಲ್ಲ. ವಿಧಾನಸಭೆ ಚುನಾವಣೆಯೆ ಬೇರೆ ಲೋಕಸಭಾ ಚುನಾವಣೆಯೇ ಬೇರೆ ಎಂದರು.  

ರಮೇಶ ಕತ್ತಿಯ ಮುನಿಸಿನ ಕುರಿತ ಪ್ರತಿಕ್ರಿಯಿಸಿದ ಅವರು ಕೆಲವೊಂದು ಕೆಲಸದಲ್ಲಿ ಇದ್ದಾರೆ. ಅವರು ಸಹ ಪ್ರಚಾರಕ್ಕೆ ಬರುತ್ತಾರೆ ಎಂದರು. ಕೊವಿಡ್ ಹಾಗೂ ಪ್ರವಾಹ ಸಂದರ್ಭದಲ್ಲಿ ನಾನು ನಮ್ಮ ಸಂಸ್ಥೆಯ ಸದಸ್ಯರು, ನಮ್ಮ ಶಾಸಕರು ಒಳ್ಳೆಯ ರೀತಿಯಾಗಿ ಕೆಲಸ ಮಾಡಿದ್ದಾರೆ. ಈ ಬಾರಿ ಜನರ ಬೆಂಬಲ ನೋಡಿದರೆ 2 ಲಕ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಗೆಲವು ಸಾಧಿಸುತ್ತೇವೆ ಎಂದರು.  

ಬಳಿಕ ಲೋಕಸಭಾ ಚುನಾವಣೆ ಪ್ರಭಾರಿ ಪಿ.ಎಚ್‌.ಪೂಜಾರ ಮಾತನಾಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಪರ ಅಲೆ ಇದೆ. ಪ್ರಧಾನಿ ನರೇಂದ್ರ ಮೋದಿಯವರು ವಿಶ್ವನಾಯಕರಾಗಿ ಹೊರಹೊಮ್ಮಿದ್ದಾರೆ. ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿ ಆಗುವುದು ನಿಶ್ಚಿತ ಎಂದರು. ಅಣ್ಣಾಸಾಹೇಬ ಜೊಲ್ಲೆಯವರು ಮಾಡಿದ ಅಭಿವೃದ್ಧಿ ಕಾರ್ಯಗಳು ತಮ್ಮ ಸಂಸ್ಥೆಯ ಮೂಲಕ ಮಾಡಿರುವ ಉದ್ಯೋಗ ಸೃಷ್ಟಿ ಇವೆಲ್ಲವೂ ಕಾರ್ಯಗಳನ್ನು ಜನರು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ಅಣ್ಣಾಸಾಹೇಬ ಜೊಲ್ಲೆ ಗೆಲವು ನಿಶ್ಚಿತ ಎಂದರು.  

ಶಾಸಕಿ ಶಶಿಕಲಾ ಜೊಲ್ಲೆ ಶಾಸಕ ದುರ್ಯೋಧನ ಐಹೊಳೆ, ಮಾಜಿ ಶಾಸಕರಾದ ಶ್ರೀಮಂತ ಪಾಟೀಲ, ಕಲ್ಲಪ್ಪಣಾ ಮಗೆನ್ನವರ, ಮಹೇಶ ಕುಮಟಳ್ಳಿ, ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಡಾ. ರಾಜೇಶ್ ನೇರ್ಲಿ, ಶಿವಾನಂದ ನವಲಿಹಾಳ, ಅಮೃತ ಕುಲಕರ್ಣಿ, ಅಪ್ಪಾಸಾಹೇಬ ಚೌಗಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.