ದೆಹಲಿಯನ್ನು ಮುನ್ನಡೆಸುವ ಅಭ್ಯರ್ಥಿಯೇ ಬಿಜೆಪಿಯಲ್ಲಿಲ್ಲ: ಮಾಜಿ ಮುಖ್ಯಮಂತ್ರಿ ಆತಿಶಿ
BJP does not have a candidate to lead Delhi: Former Chief Minister Atishi
ನವದೆಹಲಿ 17: ನೂತನ ಮುಖ್ಯಮಂತ್ರಿ ಘೋಷಣೆ ಹಾಗೂ ಹೊಸ ಸರ್ಕಾರ ರಚನೆ ವಿಳಂಬ ಖಂಡಿಸಿ ಎಎಪಿ ನಾಯಕಿ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಆತಿಶಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆತಿಶಿ, ಚುನಾವಣಾ ಫಲಿತಾಂಶ ಪ್ರಕಟವಾಗಿ 10 ದಿನವಾಗುತ್ತಿದೆ. ಬಿಜೆಪಿಯು ಫೆಬ್ರುವರಿ 9ರಂದೇ ಮುಖ್ಯಮಂತ್ರಿ ಹೆಸರು ಘೋಷಿಸಲಿದ್ದು, ಕ್ಯಾಬಿನೆಟ್ ರಚಿಸಿ, ತಕ್ಷಣವೇ ಅಭಿವೃದ್ಧಿ ಕಾರ್ಯಗಳನ್ನು ಆರಂಭಿಸಲಿದೆ ಎಂದು ಜನರು ಭಾವಿಸಿದ್ದರು. ಆದರೆ, ಅವರ ಬಳಿ ದೆಹಲಿಯನ್ನು ಮುನ್ನಡೆಸುವ ಅಭ್ಯರ್ಥಿಯೇ ಇಲ್ಲ ಎಂಬುದು ಇದೀಗ ಸ್ಪಷ್ಟವಾಗಿದೆ' ಎಂದು ಟೀಕಿಸಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದಿರುವ ಯಾರ ಮೇಲೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಂಬಿಕೆ ಇಲ್ಲ ಎಂದಿರುವ ಎಎಪಿ ನಾಯಕಿ, ಕೇಸರಿ ಪಕ್ಷವು ದೂರದೃಷ್ಟಿ ಹೊಂದಿಲ್ಲ ಎಂದು ದೂರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 