ದೆಹಲಿಯನ್ನು ಮುನ್ನಡೆಸುವ ಅಭ್ಯರ್ಥಿಯೇ ಬಿಜೆಪಿಯಲ್ಲಿಲ್ಲ: ಮಾಜಿ ಮುಖ್ಯಮಂತ್ರಿ ಆತಿಶಿ
BJP does not have a candidate to lead Delhi: Former Chief Minister Atishi
ನವದೆಹಲಿ 17: ನೂತನ ಮುಖ್ಯಮಂತ್ರಿ ಘೋಷಣೆ ಹಾಗೂ ಹೊಸ ಸರ್ಕಾರ ರಚನೆ ವಿಳಂಬ ಖಂಡಿಸಿ ಎಎಪಿ ನಾಯಕಿ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಆತಿಶಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆತಿಶಿ, ಚುನಾವಣಾ ಫಲಿತಾಂಶ ಪ್ರಕಟವಾಗಿ 10 ದಿನವಾಗುತ್ತಿದೆ. ಬಿಜೆಪಿಯು ಫೆಬ್ರುವರಿ 9ರಂದೇ ಮುಖ್ಯಮಂತ್ರಿ ಹೆಸರು ಘೋಷಿಸಲಿದ್ದು, ಕ್ಯಾಬಿನೆಟ್ ರಚಿಸಿ, ತಕ್ಷಣವೇ ಅಭಿವೃದ್ಧಿ ಕಾರ್ಯಗಳನ್ನು ಆರಂಭಿಸಲಿದೆ ಎಂದು ಜನರು ಭಾವಿಸಿದ್ದರು. ಆದರೆ, ಅವರ ಬಳಿ ದೆಹಲಿಯನ್ನು ಮುನ್ನಡೆಸುವ ಅಭ್ಯರ್ಥಿಯೇ ಇಲ್ಲ ಎಂಬುದು ಇದೀಗ ಸ್ಪಷ್ಟವಾಗಿದೆ' ಎಂದು ಟೀಕಿಸಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದಿರುವ ಯಾರ ಮೇಲೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಂಬಿಕೆ ಇಲ್ಲ ಎಂದಿರುವ ಎಎಪಿ ನಾಯಕಿ, ಕೇಸರಿ ಪಕ್ಷವು ದೂರದೃಷ್ಟಿ ಹೊಂದಿಲ್ಲ ಎಂದು ದೂರಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 