ಪೌರಕಾರ್ಮಿಕರ ಅನಿರ್ದಿಷ್ಟಾವದಿ ಮುಷ್ಕರಕ್ಕೆ: ಬಿಜೆಪಿ ಮುಖಂಡ ವಿರೂಪಾಕ್ಷ ಮಾಮನಿ ಬೆಂಬಲ
BJP leader Virupaksha Mamani supports indefinite strike of civil servants
ಸವದತ್ತಿ 29: ಯಲ್ಲಮ್ಮ ಪುರಸಭೆ ಪೌರ ಕಾರ್ಮಿಕರು ಎರಡನೇ ದಿನದ ಅನಿರ್ಧಿಷ್ಟಾವಧಿ ಪ್ರತಿಭಟನೆ ಬಿಜೆಪಿ ಮಂಡಳ ಅಧ್ಯಕ್ಷರು ವಿರೂಪಾಕ್ಷ ಮಾಮನಿ ಬೆಂಬಲ ವ್ಯಕ್ತಪಡಿಸಿದರು.
ಈ ವೇಳೆ ಕಸ ವಿಲೇವಾರಿ, ವಾಹನ ಚಾಲಕರು, ಒಳ ಚರಂಡಿ ನಿರ್ವಹಣೆ ಹಾಗೂ ಕಛೇರಿ ಕಾರ್ಯಗಳು ಸ್ಥಗಿತದಿಂದ ಪೌರ ಕಾರ್ಮಿಕರು ಆರಂಭಿಸಿರುವ "ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿ, ಅವರ ಬೇಡಿಕೆಗಳನ್ನು ಆಲಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಲಾಯಿತು.ವಿರೂಪಾಕ್ಷ ಮಾಮನಿ ಮಾತನಾಡಿ ಕಳೆದ 2 ದಿನಗಳಿಂದ ರಾಜ್ಯದ ಬಹುತೇಕ ಪೌರ ಕಾರ್ಮಿಕರ ಆಡಳಿತ ಸ್ತಬ್ಧವಾಗಿದ್ದು ನೀರು ಪೂರೈಕೆ, ತ್ಯಾಜ್ಯ ವಿಲೇವಾರಿ, ದಾಖಲೆಗಳ ವಿತರಣೆ ಈ ರೀತಿ ದಿನ ನಿತ್ಯದ ಕೆಲಸ ಕಾರ್ಯಗಳು ನಿಂತುಹೋಗಿ ಸಾರ್ವಜನಿಕರು ಕಷ್ಟಪಡುವಂತಾಗಿದೆ ಸರಕಾರ ಕೂಡಲೇ ಪೌರಕಾರ್ಮಿಕರು ಕಷ್ಟಗಳಿಗೆ ಸ್ಪಂದಿಸುವ ಅವರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರು ಅರ್ಜುನ ಅಮೋಜಿ, ವಿರೇಶ ಪ್ರಭುನವರ ಹಾಗೂ ಪ್ರಮುಖರು ಪ್ರಮೋದ ಕಾರದಗಿ, ಮಲ್ಲಿಕಾರ್ಜುನ ಬೀಳಗಿ, ಸುನೀಲ ಮಾಮನಿ ಹಾಗೂ ಪೌರ ಕಾರ್ಮಿಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 