ಮಹಾ ವಿಧಾನಸಭಾ ಚುನಾವಣೆ : ಅ 15 ರಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ
ಮುಂಬೈ, ಅ 15: ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಅ 15 ರಂದು ಪ್ರಣಾಳಿಕೆ ಬಿಡುಗಡೆ ಮಾಡಲಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮುಂಬೈನಲ್ಲಿ ಅ 15 ರ ಬೆಳಗ್ಗೆ ಪಕ್ಷದ ಸಂಕಲ್ಪ ಪತ್ರ ಬಿಡುಗಡೆ ಮಾಡಲಿದ್ದಾರೆ. ಅ 21 ರಂದು ರಾಜ್ಯದ 288 ಸದಸ್ಯಬಲದ ವಿಧಾನಸಭೆಗೆ ಮತದಾನ ನಡೆಯಲಿದೆ. ಮತ ಎಣಿಕೆ ಅ 24 ರಂದು ನಡೆಯಲಿದೆ. ಹರಿಯಾಣ ವಿಧಾನಸಭೆಗೂ ಇದೇ ದಿನದಂದು ನಡೆಯಲಿರುವ ಮತದಾನಕ್ಕೆ ಬಿಜೆಪಿ ಕಳೆದ ಭಾನುವಾರವಷ್ಟೇ ಸಂಕಲ್ಪ ಪತ್ರ ಬಿಡುಗಡೆ ಮಾಡಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 