ಬಿಎಸ್ವೈಗೆ ಸರ್ಕಾರ ರಚಿಸುವ, ಬೀಳಿಸುವ ಕಲೆ ಗೊತ್ತಿದೆ: ಎಚ್ಡಿಕೆ
ಎಚ್.ಡಿ.ಕೋಟೆ, ಫೆ.6, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ಬೀಳಿಸಲು ಮತ್ತು ಸರ್ಕಾರ ರಚಿಸುವ ಕಲೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ಅವರು ಈ ಹಿಂದೆ ಏನೆಲ್ಲಾ ಮಾಡಿದ್ದರು, ಹೇಗೆ ಸರ್ಕಾರ ರಚಿಸಿದ್ದರು ಎಂಬುದನ್ನು ಜನ ನೋಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದಷ್ಟೇ ಹೇಳುತ್ತೇನೆ ಎಂದು ಕುಮಾರಸ್ವಾಮಿ ಎಚ್.ಡಿ.ಕೋಟೆಯ ಕಂಚಮಳ್ಳಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ಯಡಿಯೂರಪ್ಪ ಅವರು ಬೆಳಗ್ಗೆ ಒಂದು ತೀರ್ಮಾನ, ಮಧ್ಯಾಹ್ನ ಮತ್ತೊಂದು ತೀರ್ಮಾನ ಕೈಗೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.ಈ ಹಿಂದೆ ಅವರು 105 ಜನ ಬಿಜೆಪಿ ಶಾಸಕರು ಕಡುಬು ತಿಂದುಕೊಂಡು ಕೂತಿರುತ್ತಾರಾ ? ಎಂದು ಯಡಿಯೂರಪ್ಪ ಕೇಳಿದ್ದರು.ಮುಂದೆ ಯಾರನ್ನು ಹೊಗಳುತ್ತಾರೆ ಕಾದು ನೋಡಿ, 10 ಜನ ಪ್ರಮಾಣ ವಚನ ಸ್ವೀಕಾರ ಮಾಡಿದರೂ ಹೊಗಳುತ್ತಾರೋ ಬಯ್ಯುತ್ತಾರೋ ನೋಡಿ ಎಂದು ಹೇಳಿದರು. ಈಗ 10 ಜನ ಸಚಿವರಾಗಿದ್ದಾರೆ. ಉಳಿದವರು ಸುಮ್ಮನೆ ಇರುತ್ತಾರಾ ? ಎಂದು ಪ್ರಶ್ನಿಸಿದ ಅವರು, ಕೋಡಿ ಮಠದ ಸ್ವಾಮೀಜಿ ಈಗಾಗಲೇ ಭವಿಷ್ಯ ನುಡಿದಿದ್ದಾರೆ. ಈ ಗ ಸಮಸ್ಯೆ ಇಲ್ಲ, ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ. ಭವಿಷ್ಯ ಹೇಳಲು ನಾನು ಜ್ಯೋತಿಷಿ ಅಲ್ಲ ಎಂದು ಕಂಚಮಳ್ಳಿಯಲ್ಲಿ ಕುಮಾರಸ್ವಾಮಿ ಹೇಳಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 