ರಂಜಾನ್ ಹಬ್ಬಕ್ಕೆ ಶುಭಕೋರಿದ ಬಿಎಸ್ ವೈ
ಬೆಂಗಳೂರು, ಮೇ 25,ಇಂದು ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಸಚಿವರು ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ‘‘ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿಗೆ ಎದುರಾಗಿರುವ ಕೋವಿಡ್ ಸಂಕಷ್ಟಗಳು ಪರಿಹರಿಸಲಿ, ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸೋಣ. ಎಲ್ಲರೂ ಮನೆಯೊಳಗೇ ಇದ್ದು, ಸುರಕ್ಷಿತವಾಗಿ ಹಬ್ಬವನ್ನು ಆಚರಿಸಿ. ಈದ್ ಮುಬಾರಕ್’’ ಎಂದು ಶುಭಾಶಯಗಳನ್ನು ತಿಳಿಸಿದ್ದಾರೆ.ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರು, ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.ಮನೆಗಳಲ್ಲಿಯೇ ಹಬ್ಬವನ್ನು ಆಚರಿಸೋಣ, ಕೊರೊನ ಹರಡುವಿಕೆ ತಡೆಗಟ್ಟೋಣ ಎಂದು ವಿನಂತಿಸಿಕೊಂಡಿದ್ದಾರೆ.ಇನ್ನು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು, ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ಈದ್ ಹಬ್ಬವು ಎಲ್ಲರಿಗೂ ಸುಖ, ಸಂತೋಷ, ಆರೋಗ್ಯ, ಸಮೃದ್ಧಿಗಳನ್ನು ಅನುಗ್ರಹಿಸಲಿ ಎಂದು ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 