ಬಕ್ರೀದ್ ಹಬ್ಬದ ಶಾಂತಿ ಸಭೆ
Bakrid festival peace meeting
ಬಳ್ಳಾರಿ 03: ಕುರುಗೋಡು ತಾಲೂಕಿನಲ್ಲಿ ಶಾಂತಿ ಕದಡುವ ಪ್ರಯತ್ನವನ್ನು ಸಹಿಸುವುದಿಲ್ಲ. ಕೋಮುದ್ವೇಷ ಹರಡುವ ಹಾಗೂ ಹಿಂಸೆಗೆ ಪ್ರಚೋದನೆ ನೀಡುವವರ ಮೇಲೆ ನಿಗಾ ಇಡಲಾಗಿದೆ. ಇಂತಹವರ ವಿರುದ್ಧ ಗೂಂಡಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ವಿಶ್ವನಾಥ ಹೀರೆಗೌಡ ಎಚ್ಚರಿಕೆ ನೀಡಿದ್ದಾರೆ.
ಹಾಗೂ ಜೂನ್ 7 ರ ಬಕ್ರೀದ್ ಹಬ್ಬದ ಅಂಗವಾಗಿ ಕುರುಗೋಡು ತಾಲೂಕಿನ ಪೊಲೀಸ್ ಠಾಣೆಯಲ್ಲು ಮಂಗಳವಾರ ಮುಖಂಡರ ಸೌಹಾರ್ದ ಸಭೆ ನಡೆಯಿತು. ಸಂಚಾರ ನಿಯಮ ಉಲ್ಲಂಘನೆ, ಸ್ವಚ್ಛತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಚರ್ಚೆ ನಡೆಯಿತು.ಸಾಮಾಜಿಕ ಜಾಲತಾಣದಲ್ಲಿ ಹರಡುವ ವದಂತಿ ಸವಾಲಾಗಿ ಪರಿಣಮಿಸುತ್ತಿದೆ. ವಾಸ್ತವ ತಿರುಚಿ ಸಂದೇಶ ರವಾನಿಸುವ ಯುವಸಮೂಹ ಸಮಸ್ಯೆಗೆ ಸಿಲುಕುತ್ತಿದೆ. ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಡಲಾಗಿದ್ದು, ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ’ ಎಂದು ಪಿಎಸ್ ಐ ಸುಪ್ರೀತ್ ವಿರುಪಾಕ್ಷಪ್ಪ ಹೇಳಿದರು.ಹಬ್ಬದಲ್ಲಿ ಸಂಚಾರ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಹಬ್ಬದ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ನಿಗದಿಗಿಂತ ಹೆಚ್ಚು ಜನರು ಸಂಚರಿಸಲು ಅವಕಾಶವಿಲ್ಲ. ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುತ್ತದೆ. ಮಾದಕ ದ್ರವ್ಯ ಕಳ್ಳಸಾಗಣೆ, ಮಾರಾಟ ಕಂಡುಬಂದರೆ ಮಾಹಿತಿ ನೀಡಿ’ ಎಂದು ಮನವಿ ಮಾಡಿದರು.
‘ತ್ಯಾಗ ಮತ್ತು ಸೌಹಾರ್ದ ಸಂಕೇತದ ಹಬ್ಬ ಬಕ್ರೀದ್. ಪ್ರೀತಿ, ಸಹೋದರತ್ವ ಸಾರಲು ಈ ಹಬ್ಬ ಮಾಡಲಾಗುತ್ತದೆ. ಬೇರೆ ಧರ್ಮೀಯರ ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಬಕ್ರಿದ್ ಹಬ್ಬ ಆಚರಣೆ ಮಾಡುವ ಅಗತ್ಯ ಇದೆ’ ಎಂದು ಮುಸ್ಲಿಂ ಸಮುದಾಯದ ಮುಖಂಡರು ಹೇಳಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 