ಬಾಳೇಸರ: ಮಳೆ, ಗಾಳಿಗೆ ಅಪಾರ ಹಾನಿ
ಲೋಕದರ್ಶನ ವರದಿ
ಸಿದ್ದಾಪುರ: ತಾಲೂಕಿನ ಬಾಳೇಸರದಲ್ಲಿ ಬುಧವಾರ ರಾತ್ರಿ ಬೀಸಿದ ಗಾಳಿಗೆ ಹಾಗೂ ಸುರಿದ ಮಳೆಗೆ ಬಿಎಸ್ಎನ್ಎಲ್ನ ಟವರ್, ಪೊವರ್ ಪ್ಲಾಂಟ್ನ ಮನೆಯ ಮೇಲ್ಚಾವಣಿ ಹಾರಿ ಹೋಗಿ ಉಪಕರಗಳು ಹಾನಿಗೊಂಡಿದೆ.
ಮೇಲ್ಚಾವಣಿ ಹಾರಿ ಹೋಗಿದ್ದರಿಂದ ಒಳಗಡೆ ನೀರು ತುಂಬಿಕೊಂಡಿದೆ. ಸ್ಥಿರ ದೂರವಾಣಿ ಹಾಗೂ ಮೊಬೈಲ್ ಟವರ್ ಸೇವೆ ಸ್ಥಗಿತಗೊಂಡಿದೆ.
ಈ ಕುರಿತು ಬಿಎಸ್ಎನ್ಲ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಸ್ಥಿರ ಹಾಗೂ ಮೊಬೈಲ್ ಟವರ್ ಸರಿಪಡಿಸಿ ಗ್ರಾಹಕರಿಗೆ ಅನುಕೂಲಮಾಡಿಕೊಡುವಂತೆ ಬಾಳೇಸರ ಸುತ್ತಮುತ್ತಲಿನ ದೂರವಾಣಿ ಗ್ರಾಹಕರು ಆಗ್ರಹಿಸಿದ್ದಾರೆ.
ಬಿದ್ರಕಾನ ಗ್ರಾಪಂ ವ್ಯಾಪ್ತಿಯ ಮಣ್ಣಿಕೊಪ್ಪದ ಮಾದೇವ ಗೋವಿಂದ ನಾಯ್ಕ ಅವರ ಮನೆಯ ಮೇಲೆ ಮರವೊಂದು ಬಿದ್ದು ಭಾಗಶಃ ಮನೆ ಜಖಂಗೊಂಡಿದೆ. ಅಂದಾಜು 20ಸಾವಿರ ರೂ ಹಾನಿ ಸಂಭವಿಸಿದೆ.
ಇಟಗಿ ಸಮೀಪದ ಚಂದ್ರಘಟಗಿಯ ವಾಸ್ತವ್ಯದ ಮನೆಯೊಂದಕ್ಕೆ ಸಿಡಿಲು ಬಡಿದು ಕೆರಿಯಪ್ಪ ಕನ್ನ ನಾಯ್ಕ ಹಾಗೂ ಪ್ರಶಾಂತ ಕೆರಿಯಪ್ಪ ನಾಯ್ಕ ಇವರಿಗೆ ಸ್ವಲ್ಪ ಪ್ರಮಾಣದಲ್ಲಿ ಸಿಡಿಲು ಬಡಿದಿದೆ. ಇಬ್ಬರೂ ಚಿಕಿತ್ಸೆ ಪಡೆದುಕೊಂಡಿದ್ದರೆ ಮನೆಯಲ್ಲಿನ ವಿದ್ಯುತ್ ಉಪಕರಣಗಳು ಸುಟ್ಟುಹೋಗಿದ್ದು ಐವತ್ತು ಸಾವಿರ ರೂಗಳಷ್ಟು ಹಾನಿ ಸಂಭವಿಸಿದೆ.
ಬಿದ್ರಕಾನ ಗ್ರಾಪಂ ವ್ಯಾಪ್ತಿಯ ಅಗಳಗದ್ದೆಯ ಶೋಭಾ ಬಿಳಿಯಾ ಗೌಡ ಅವರ ಕೊಟ್ಟಿಗೆ ಮನೆಗೆ ಗುರುವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ಬಿದ್ದು ಕೊಟ್ಟಿಗೆ ಮನೆ ಸಂಪೂರ್ಣ ಸುಟ್ಟು ಹೋಗಿದ್ದು ಅಂದಾಜು 20ಸಾವಿರ ರೂಗಳಷ್ಟು ಹಾನಿ ಸಂಭವಿಸಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 