ಪೆಹಲ್ಗಾಮ್ ಹೀನ ಕೃತ್ಯ ಖಂಡಿಸಿ ಬಾರ್ ಅಸೋಶಿಯೇಶನ್ ಮನವಿ
Bar Association appeals to condemn Pahalgam atrocities
ಪೆಹಲ್ಗಾಮ್ ಹೀನ ಕೃತ್ಯ ಖಂಡಿಸಿ ಬಾರ್ ಅಸೋಶಿಯೇಶನ್ ಮನವಿ
ಬೆಳಗಾವಿ 24: ಜಮ್ಮು ಕಾಶ್ಮೀರ ಪೆಹಲ್ಗಾಮ್ನಲ್ಲಿ ಭಯೋತ್ಪಾದಕರ ಹಿಂದೂ ಪ್ರವಾಸಿಗರ ನರಸಂಹಾರ ತೀವ್ರವಾಗಿ ಖಂಡಿಸಿ ಬೆಳಗಾವಿ ಬಾರ್ ಅಸೋಶಿಯೇಶನ್ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ನರೇಂದ್ರ ಮೋದಿಜಿಯವರಿಗೆ ಮನವಿ ಸಲ್ಲಿಸಿದರು.
ಈ ಕೃತ್ಯ ಮಾಡಿದ ಮಾನವೀಯತೆಯ ವಿರೋಧಿಗಳ ಮೇಲೆ ಪ್ರತಿಕಾರ ತೀರಿಸಿಕೊಳ್ಳಬೇಕು. ಶಾಂತಿ ನೆಲೆಸಿದ ಜಮ್ಮು ಕಾಶ್ಮೀರದಲ್ಲಿ ಮತ್ತೇ ಅಶಾಂತಿ ಉಂಟು ಮಾಡಲು ದೇಶದ ಸೌಹಾರ್ದತೆಯನ್ನು ಕದಡಲು ಹವಣಿಸುತ್ತಿರುವ ದುಷ್ಟ ಶಕ್ತಿಗಳನ್ನು ಸಂಪೂರ್ಣ ನಿರ್ನಾಮ ಮಾಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ದೇಶ ಹಿತಕ್ಕಾಗಿ, ಅಮಾಯಕ ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿರುವ ದಾಳಿ ಹೇಯ ಕೃತ್ಯ. ಈ ಘಟನೆಯಲ್ಲಿ ಮಡಿದವರ, ಅವರ ಕುಟುಂಬದವರೊಂದಿಗೆ ನಾವಿದ್ದೇವೆ. ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ನಮ್ಮ ಸಂಪೂರ್ಣ ಬೆಂಬಲವಿರಲಿದೆ ಎಂದು ಬಾರ್ ಅಸೋಶಿಯೇಶನ್ ಮನವಿಯಲ್ಲಿ ತಿಳಿಸಿದೆ.
ಬಾರ್ ಅಸೋಶಿಯೇಶನ್ ಅಧ್ಯಕ್ಷ ಕಿವಡಸಣ್ಣವರ, ಜ. ಸೆಕ್ರೆಟರಿ ವಾಯ್. ಕೆ.ದಿವಟೆ ಸೇರಿದಂತೆ ಅಸೋಶಿಯೇಶನ್ ಪದಾಧಿಕಾರಿಗಳು ನ್ಯಾಯವಾದಿಗಳು ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 