ಸೆ. 1ರಂದು ಬಸವ ಸಂಸ್ಕೃತಿ ಅಭಿಯಾನ
Basava Culture Campaign on Sept. 1
ಸಿಂದಗಿ 26: ಸಪ್ಟೆಂಬರ್ 1ರಂದು ಬಸವನಬಾಗೇವಾಡಿಯಲ್ಲಿ ಸಾಂಸ್ಕೃತಿಕ ನಾಯಕ ಸ್ತ್ರೀ, ಪಥಿತ, ದೀನ-ದಲಿತ ಕುಲೋದ್ಧಾರಕ, ಇಷ್ಟಲಿಂಗ ಜನಕ, ಲಿಂಗಾಯತ ಧರ್ಮಗುರು, ವಿಶ್ವದ ಮೊದಲ ಪ್ರಜಾಪ್ರಭುತ್ವದ ಜನಕ, ಜಗಜ್ಯೋತಿ ಬಸವಣ್ಣನವರ ಬಸವ ಸಂಸ್ಕೃತಿ ಅಭಿಯಾನವನ್ನು ಲಿಂಗಾಯತ ಪೀಠಾಧೀಪತಿಗಳ ಒಕ್ಕೂಟ ಹಾಗೂ ಬಸವ ಪರ ಎಲ್ಲಾ ಸಂಘಟನೆಗಳಿಂದ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಈ ಅವಿಸ್ಮರಣೀಯ ಮತ್ತು ಅಭೂತಪೂರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಸವ ಕೃಪೆಗೆ ಪಾತ್ರರಾಗಬೇಕೆಂದು ವಿಜಯಪುರ ಜಾಗತಿಕ ಲಿಂಗಾಯತ ಮಹಾಸಭಾ ಮತ್ತು ಎಲ್ಲಾ ಬಸವಪರ ಸಂಘಟನೆಗಳ ಪರವಾಗಿ ಅಂಬಿಕಾ ಪಾಟೀಲ ಮಾರ್ಸನಳ್ಳಿ ವಿನಂತಿಸಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸಲು ಇಚ್ಛಿಸುವ ಸರ್ವರು, ಮಹಿಳೆಯರು- ಇಳಕಲ ಸೀರೆಯನ್ನು ಧರಿಸಬೇಕು. ಪುರುಷರು-ನೆಹರು ಶರ್ಟ, ಗಾಂಧಿ ಟೊಪ್ಪಿಗೆ, ಬಿಳಿ ಲುಂಗಿ/ಪೈಜಾಮಾ ಅಥವಾ ಧೋತಿಯನ್ನು ಧರಸಿ ಬರಬೇಕು. ಈ ಮೇಲೆ ತಿಳಿಸಿದ ಉಡುಗೆಳನ್ನು ಧರಿಸಿ ಸಾಂಸ್ಕೃತಿಕ ಅಭಿಯಾನಕ್ಕೆ ಶೋಭೆ ತರಬೇಕೆಂದು ಅಲ್ಲದೆ ದಿ. 27 ಮತ್ತು 28ರ ಒಳಗಾಗಿ ತಮ್ಮ ಮಾಹಿತಿಯನ್ನು ನೀಡಿ ಸ್ಥಳ ಕಾಯ್ದಿರಿಸಿಕೊಳ್ಳಬೇಕು. ಮಾಹಿತಿಗೆ 7795344023 ಸಂಪರ್ಕಿಸುವಂತೆ ಕೋರಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 