ಸೆ. 1ರಂದು ಬಸವ ಸಂಸ್ಕೃತಿ ಅಭಿಯಾನ
Basava Culture Campaign on Sept. 1
ಸಿಂದಗಿ 26: ಸಪ್ಟೆಂಬರ್ 1ರಂದು ಬಸವನಬಾಗೇವಾಡಿಯಲ್ಲಿ ಸಾಂಸ್ಕೃತಿಕ ನಾಯಕ ಸ್ತ್ರೀ, ಪಥಿತ, ದೀನ-ದಲಿತ ಕುಲೋದ್ಧಾರಕ, ಇಷ್ಟಲಿಂಗ ಜನಕ, ಲಿಂಗಾಯತ ಧರ್ಮಗುರು, ವಿಶ್ವದ ಮೊದಲ ಪ್ರಜಾಪ್ರಭುತ್ವದ ಜನಕ, ಜಗಜ್ಯೋತಿ ಬಸವಣ್ಣನವರ ಬಸವ ಸಂಸ್ಕೃತಿ ಅಭಿಯಾನವನ್ನು ಲಿಂಗಾಯತ ಪೀಠಾಧೀಪತಿಗಳ ಒಕ್ಕೂಟ ಹಾಗೂ ಬಸವ ಪರ ಎಲ್ಲಾ ಸಂಘಟನೆಗಳಿಂದ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಈ ಅವಿಸ್ಮರಣೀಯ ಮತ್ತು ಅಭೂತಪೂರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಸವ ಕೃಪೆಗೆ ಪಾತ್ರರಾಗಬೇಕೆಂದು ವಿಜಯಪುರ ಜಾಗತಿಕ ಲಿಂಗಾಯತ ಮಹಾಸಭಾ ಮತ್ತು ಎಲ್ಲಾ ಬಸವಪರ ಸಂಘಟನೆಗಳ ಪರವಾಗಿ ಅಂಬಿಕಾ ಪಾಟೀಲ ಮಾರ್ಸನಳ್ಳಿ ವಿನಂತಿಸಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸಲು ಇಚ್ಛಿಸುವ ಸರ್ವರು, ಮಹಿಳೆಯರು- ಇಳಕಲ ಸೀರೆಯನ್ನು ಧರಿಸಬೇಕು. ಪುರುಷರು-ನೆಹರು ಶರ್ಟ, ಗಾಂಧಿ ಟೊಪ್ಪಿಗೆ, ಬಿಳಿ ಲುಂಗಿ/ಪೈಜಾಮಾ ಅಥವಾ ಧೋತಿಯನ್ನು ಧರಸಿ ಬರಬೇಕು. ಈ ಮೇಲೆ ತಿಳಿಸಿದ ಉಡುಗೆಳನ್ನು ಧರಿಸಿ ಸಾಂಸ್ಕೃತಿಕ ಅಭಿಯಾನಕ್ಕೆ ಶೋಭೆ ತರಬೇಕೆಂದು ಅಲ್ಲದೆ ದಿ. 27 ಮತ್ತು 28ರ ಒಳಗಾಗಿ ತಮ್ಮ ಮಾಹಿತಿಯನ್ನು ನೀಡಿ ಸ್ಥಳ ಕಾಯ್ದಿರಿಸಿಕೊಳ್ಳಬೇಕು. ಮಾಹಿತಿಗೆ 7795344023 ಸಂಪರ್ಕಿಸುವಂತೆ ಕೋರಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 