ಭಾರತ ಬಂದ್ ಸಹಜ ಸ್ಥಿತಿಯಲ್ಲಿ ಬಸವನಬಾಗೇವಾಡಿ ಪಟ್ಟಣ: ರಸ್ತೆಗಿಳಿಯದ ಸರಕಾರಿ ಬಸ್
ಲೋಕದರ್ಶನ ವರದಿ
ಬಸವನಬಾಗೇವಾಡಿ: ಕಾಂಗ್ರೆಸ್ ನೇತೃತ್ವದ ಮಿತ್ರಪಕ್ಷಗಳು ಕರೆ ನೀಡಿದ ಭಾರತ ಬಂದ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಟಿಪ್ಪು ಕ್ರಾಂತಿ ಸೇನೆ ಸಂಘಟನೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದನ್ನು ಹೊರತುಪಡಿಸಿದಂತೆ ಪಟ್ಟಣವು ಸೋಮವಾರ ಸಹಜ ಸ್ಥಿತಿಯಲ್ಲಿ ವಾರದ ಸಂತೆಯು ನಡೆಯಿತು.
ಸೋಮವಾರ ಎಂದಿನಂತೆ ವಾರದ ಸಂತೆಗೆ ಗ್ರಾಮೀಣ ಭಾಗದ ಜನತೆ ಪಟ್ಟಣಕ್ಕೆ ಖಾಸಗೀ ವಾಹನ-ಬೈಕ್ ಮುಖಾಂತರ ಸಂತೆಕಟ್ಟೆಗೆ ಆಗಮಿಸಿದರೇ ಅಂಗಡಿ-ಮುಗ್ಗಟ್ಟುಗಳು ಸಹಜಸ್ಥಿತಿಯಲ್ಲಿ ಎಂದಿನಂತೆ ವ್ಯಾಪಾರವಹಿವಾಟಿನಲ್ಲಿ ತಲ್ಲೀನವಾಗಿದ್ದು ಕಂಡು ಬಂತು, ಭಾರತ ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಸಾರಿಗೆ ಸಂಸ್ಥೆಯ ಬಸ್ಗಳು ರಸ್ತೆಗಿಳಿಯದೇ ದೂರುಳಿದು ಪ್ರಯಾಣಿಕರಿಗೆ ಹಾಗೂ ಜನತೆಗೆ ಓಡಾಟಕ್ಕೆ ಸ್ವಲ್ಪ ತೊಂದರೆ ಅನುಭವಿಸುವಂತಾಯಿತು.
ಬಸ್ ಸಂಚಾರ ಸ್ಥಗೀತವಾದ ಕಾರಣದಿಂದ ಪ್ರಯಾಣಿಕರು ಖಾಸಗೀ ವಾಹನಗಳ ಓಡಾಟ ಅನಿವಾರ್ಯವಾಗಿದ್ದರಿಂದ ಪ್ರಯಾಣಿಕರು ದುಬಾರಿ ಬೆಲೆ ತೆತ್ತು ಪ್ರಯಾಣಿಸಬೇಕಾಯಿತು, ಬಸ್ ಸಂಚಾರ ನಂಬಿ ಬಂದ ಕೇಲ ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಧ್ವನಿವರ್ಧಕದಲ್ಲಿ ಜಾಹೀರಾತು ಹಾಗೂ ಎಫ್ಎಂ ರೇಡಿಯೋ ಕಾರ್ಯಕ್ರಮಗಳು ಪ್ರಸಾರವಾಗುತ್ತಿರುವದನ್ನು ನಂಬಿ ಬಸ್ಗಾಗಿ ಕಾಯ್ದು ಕುಳಿತು ನಂತರ ಸಿಬ್ಬಂದಿ ವಿಚಾರಿಸಿ ಬಂದ ದಾರಿಗೆ ಸುಂಕವಿಲ್ಲ ಎಂದು ಮರಳಿದ್ದು ಕಂಡು ಬಂತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 