ಭೂ ಸುಧಾರಣಾ ತಿದ್ದುಪಡಿ ಕಾಯಿದೆ ವಿರೋಧಿಸಿ ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ
ಬೆಂಗಳೂರು, ಜೂನ್ 14, ರೈತ ನಾಯಕನೆಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ರೈತರ ಬಾಯಿಗೆ ಮಣ್ಣು ಹಾಕಲು ಹೊರಟಿದ್ದೀರಿ ಎಂದು ಮೇಲ್ಮನೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಮುಖ್ಯಮಂತ್ರಿಯವರಿಗೆ ಖಾರವಾಗಿ ಪತ್ರ ಬರೆದಿದ್ದಾರೆ.ಕರ್ನಾಟಕ ಹೈಕೋರ್ಟ್ ಆದೇಶದ ನೆಪವೊಡ್ಡಿ ಭೂಕಂದಾಯ ನಿಯಮಾವಳಿಗೆ ತಿದ್ದುಪಡಿ ತಂದಿರುವುದು ದೊಡ್ಡ ಆಘಾತ ತಂದಿದೆ. ಬೇರೆ ಯಾವುದೇ ರಾಜ್ಯದಲ್ಲಿಯೂ ಇಲ್ಲದ ಕಾನೂನು ನಮ್ಮ ರಾಜ್ಯದಲ್ಲಿ ತಂದು ಕೃಷಿಕರ ಭೂಮಿ ಕಬಳಿಸುವ ಹುನ್ನಾರು ಅಡಗಿದೆ. ಕಪ್ಪು ಹಣವುಳ್ಳವರಿಗೆ, ರಿಯಲ್ ಎಸ್ಟೇಟ್ ಮಾಡುವವರಿಗೆ ಅನ್ನದಾತರ ಜಮೀನು ಕಬಳಿಸಲು ರಹದಾರಿ ನೀಡಿದ್ದೀರಿ ಎಂದು ಪತ್ರದಲ್ಲಿ ಹೊರಟ್ಟಿ ಟೀಕಿಸಿದ್ದಾರೆ.
ಸರ್ಕಾರದ ನಿಲುವು ಮೂರ್ಖತನದ ಪರಮಾವಧಿ. ಕಾನೂನು ಜಾರಿಗೊಳಿಸಿದ್ದೇ ಆದರೆ ರೈತರು ಬಂಡಾಯವೇಳುವ ಕಾಲ ಸನ್ನಿಹಿತವಾಗಿದೆ. ಅನ್ನ ನೀಡುವ ರೈತ ಬಾಯಿಗೆ ಮಣ್ಣುಹಾಕುವ ಕೆಟ್ಟ ಕಾನೂನು ಜಾರಿಗರ ತರುವುದು ಸೂಕ್ತವಲ್ಲ. ರೈತರ ಮತ್ತಷ್ಟು ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇರೇಪಣೆ ನೀಡಿದ್ದೀರಿ. ಕೃಷಿ ಮಾಡುವುದು ಕಂಪ್ಯೂಟರ್ ದ ಕೆಲಸದಂತಲ್ಲ. ಪುಸ್ತಕ ಓದಿ ಅಡುಗೆ ಮಾಡಿದಂತೆ ಕೃಷಿ ಮಾಡಲು ಸಾಧ್ಯವಿಲ್ಲ. ಕರಾಳ ಶಾಸನ ತರುವುದೇ ಅವಿವೇಕದ ಪರಮಾವಧಿ. ಆದ್ದರಿಂದ ಭೂ ಸುಧಾರಣಾ ಕಾಯಿದೆ ತದ್ದುಪಡಿ ಹಿಂಪಡೆದು ವಿಧಾನ ಸಭೆ ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಅಲ್ಲಿಯವರೆಗೆ ತಿದ್ದುಪಡಿ ಜಾರಿ ತಡೆಹಿಡಿಯಿರಿ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 