ತಾಳಿಕೋಟಿ 16: ಪಟ್ಟಣದ ಶ್ರೀ ಎಚ್ಎಸ್ ಪಾಟೀಲ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಚ್.ಬಿ. ನಡುವಿನಕೇರಿಗೆ ರಾಜ್ಯಮಟ್ಟದ ಬಸವ ಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಭಾನುವಾರ ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ನಾಟ್ಯ ಸ್ಪೂರ್ತಿ ಆರ್ಟ್ ಆ್ಯಂಡ್ ಕಲ್ಚರಲ್ ಅಕಾಡೆಮಿ ವತಿಯಿಂದ ಹಮ್ಮಿಕೊಂಡ "ರಾಜ್ಯ ಮಟ್ಟದ ಬಸವಶ್ರೀ ಪ್ರಶಸ್ತಿ-2025" ಕಾರ್ಯಕ್ರಮದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯಸಾನಿದ್ಯ ವಹಿಸಿದ್ದ ಮನಸೂರ ರೇವಣಸಿದ್ದೇಶ್ವರ ಮಠದ ಡಾ.ಶ್ರೀ ಬಸವರಾಜ ದೇವರು "ಬಸವಶ್ರೀ ಪ್ರಶಸ್ತಿ -2025" ರಾಜ್ಯ ಮಟ್ಟದ ಪ್ರಶಸ್ತಿ ನೀಡಿ, ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ನವಲಗುಂದ ಶಾಸಕ ಎನ್.ಎಚ್.ಕೋನರಡ್ಡಿ, ಧಾರವಾಡ ಗ್ರಾಮೀಣ ಮಾಜಿ ಶಾಸಕಿ ಸೀಮಾ ಅಶೋಕ ಮಸೂತಿ, ಧಾರವಾಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದ ಇಮಾಮಸಾಬ ವಲ್ಲಪ್ಪಣ್ಣವರ, ಹಾಸ್ಯ ಕಲಾವಿದ, ಮೊಬೈಲ್ ಮಲ್ಲ್ ಮಲ್ಲಪ್ಪ ಹೊಂಗಲ್, ಸಂಸ್ಥೆಯ ಅಧ್ಯಕ್ಷ ಸದಾನಂದ ಸ. ಬಂಗೆಣ್ಣನವರ ಉಪಸ್ಥಿತರಿದ್ದರು.
ಅಭಿನಂದನೆ: ಸಂಸ್ಥೆಯಲ್ಲಿ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ.ನಡುವಿನಕೇರಿ ಇವರ ಸಾಹಿತ್ಯ ಹಾಗೂ ಶೈಕ್ಷಣಿಕ ಸೇವೆಗಾಗಿ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಮಾಡಿದ್ದಕ್ಕಾಗಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್ಎಸ್ ಪಾಟೀಲ ಹಾಗೂ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರು ಆಡಳಿತ ಮಂಡಳಿಯ ಸದಸ್ಯರು ಅಭಿನಂದಿಸಿದ್ದಾರೆ.