ಚನ್ನಪಟ್ಟಣದಲ್ಲಿ ವೃದ್ಧೆ ಮೇಲೆ ಕರಡಿ ದಾಳಿ
ರಾಮನಗರ, ಮೇ.27,ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬೆಳ್ಳಂಬೆಳಗ್ಗೆ ಕರಡಿಯೊಂದು ಪ್ರತ್ಯಕ್ಷಗೊಂಡು ವೃದ್ಧೆಯ ಮೇಲೆ ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ. ನಗರಸಭೆಯ ಮಾಜಿ ಸದಸ್ಯೆ ಸಾಕಮ್ಮ (65) ಮೇಲೆ ಕರಡಿ ದಾಳಿ ನಡೆಸಿ ಅವರ ಮುಖಕ್ಕೆ ಪರಚಿದ್ದು,ಪರಿಣಾಮವಾಗಿ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.ಕೂಡಲೇ ಅವರ ರಕ್ಷಣೆಗೆ ದೌಡಾಯಿಸಿದ ಮಗ ಸುಧೀರ್ (40) ಅವರ ಮೇಲೂ ಕರಡಿ ದಾಳಿ ನಡೆಸಿ ಗಾಯಗೊಳಿಸಿದೆ.ಸಾಕಮ್ಮ ಅವರು ಬೆಳಗ್ಗೆ ಮನೆಯಿಂದ ಹೊರಗೆ ಬಂದ ಸಂದರ್ಭದಲ್ಲಿ ಕಾಂಪೌಂಡ್ನಲ್ಲಿ ಅಡಗಿ ಕುಳಿತಿದ್ದ ಕರಡಿ ಏಕಾಏಕಿ ದಾಳಿ ನಡೆಸಿದೆ.ಸದ್ಯ ಸಾಕಮ್ಮ ಅವರನ್ನು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಮಹಮ್ಮದ್ ಮನ್ಸೂರ್ ಹೇಳಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 