ಬೆಳಗಾವಿ; ಟ್ರಾಕ್ಟರ್ ಉರುಳಿ ಆರು ಮಂದಿ ಕೂಲಿ ಕಾರ್ಮಿಕರ ಸಾವು
ಬೆಳಗಾವಿ, ಫೆ ೮, ಕಬ್ಬಿನ ಕಟಾವಿಗೆ ಕೂಲಿ ಕಾರ್ಮಿಕರನ್ನು ಹೊತ್ತೊಯ್ಯತ್ತಿದ್ದ ಟ್ರ್ಯಾಕ್ಟರ್ ವೊಂದು ಸೇತುವೆ ಮೇಲಿಂದ ಉರುಳಿ ಬಿದ್ದ ಪರಿಣಾಮ ಕನಿಷ್ಟ ಆರು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ದುರ್ಘಟನೆ ಜಿಲ್ಲೆ ಖಾನಾಪುರ ತಾಲೊಕಿನ ಬೋಗೂರ ಗ್ರಾಮದ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಬೋಗೋರ ಗ್ರಾಮದ ಸಾವಿತ್ರಿ ಬಾಬು ಹುಣಸೇ ಕಟ್ಟಿ, ತಂಗಮ್ಮ ಯಲ್ಲಪ್ಪ ಹುಣಸೇಕಟ್ಟಿ, ಅಶೋಕ ಫಕೀರಪ್ಪ, ಶಾಂತಮ್ಮ ಯಲ್ಲಪ್ಪ, ಶಾಂತವ್ವ ಹನುಮಂತ ಅಳಗುಂಡಿ, ನಾಗವ್ವ ಎಂದು ಗುರುತಿಸಲಾಗಿದೆ. ಗ್ರಾಮದ ಸಮೀಪದ ೩೦ ಅಡಿ ಎತ್ತರದ ಸೇತುವೆ ಮೇಲಿಂದ ಟ್ರಾಕ್ಟರ್ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆಅಪಘಾತ ನಡೆದ ಸ್ಥಳದಲ್ಲಿ ನಾಲ್ವರು ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಇನ್ನ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 