ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಬೆಳಗಾವಿ ಯೋಧ ಹುತಾತ್ಮ
ಬೆಳಗಾವಿ, ನ.8: ನಾಲ್ಕು ವರ್ಷಗಳ ಹಿಂದೆ ಭಾರತೀಯ ಸೈನ್ಯ ಸೇರಿದ್ದ ಬೆಳಗಾವಿಯ ಯೋಧ ರಾಹುಲ ಸುಳಗೇಕರ (22) ಹುತಾತ್ಮನಾಗಿದ್ದಾರೆ. ಬೆಳಗಾವಿ ತಾಲೂಕಿನ ಉಚಗಾವ ಗ್ರಾಮದ ಈ ವೀರ ಯೋಧ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಹೋರಾಡಿ ವೀರಮರಣವನ್ನಪ್ಪಿದ್ದಾರೆ. ರಾಹುಲ್ ರಜೆಯ ಮೇಲೆ ಗಣೇಶ ಉತ್ಸವ ವೇಳೆ ತವರಿಗೆ ಬಂದು ಕರ್ತವ್ಯಕ್ಕೆ ಹಿಂದಿರುಗಿದ್ದರು. ಜಮ್ಮುವಿನ ಪುಂಚ್ ಬಳಿ ಭಯೋತ್ಪಾದಕರೊಂದಿಗೆ ಸೆಣಸಾಡುವಾಗ ಗುಂಡು ತಗುಲಿ ಹುತಾತ್ಮನಾಗಿದ್ದಾರೆ. ರಾಹುಲ್ ಅಣ್ಣ ಮಯೂರ ಕೂಡ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಹುಲ್ ಅವರ ತಂದೆ ಸಹ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತನ್ನ ಇಬ್ಬರೂ ಮಕ್ಕಳನ್ನೂ ಸೇನೆಗೆ ಸೇರಿಸಿ ತಂದೆ ಭೈರು ಸುಳಗೇಕರ ದೇಶಾಭಿಮಾನ ಮೆರೆದಿದ್ದಾರೆ. ಉಚಗಾವಗೆ ಶುಕ್ರವಾರ ಸಂಜೆ ಯೋಧನ ಪಾರ್ಥಿವ ಶರೀರ ಆಗಮಿಸುವ ಸಾಧ್ಯತೆ ಇದ್ದು, ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 