ಬಳ್ಳಾರಿ: 31ನೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ
ಲೋಕದರ್ಶನ ವರದಿ
ಬಳ್ಳಾರಿ 18: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಳ್ಳಾರಿ ಶಾಖೆ, ಪೊಲೀಸ್ ಇಲಾಖೆ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ಇವರ ವತಿಯಿಂದ "31ನೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ" ಅಂಗವಾಗಿ "ಸೋಶಿಯಲ್ ಎಮರ್ಜೆನ್ಸಿ ರೆಸ್ಪಾನ್ಸ್ ವಾಲಂಟಿಯರ್ಸ್" ಇವರಿಂದ ರಸ್ತೆ ಅಪಘಾತಗಳ ಬಗ್ಗೆ "ಅಣಕು ಪ್ರದರ್ಶನ" (ಪ್ರಾತ್ಯಾಕ್ಷಿಕತೆ)ವನ್ನು ನಡೆಸಲಾಯಿತು.
ಸಂಜೆ 5.00 ಗಂಟೆಗೆ ಮೋತಿ ವೃತ್ತದಲ್ಲಿ ರಸ್ತೆ ಅಪಘಾತ ಬಗ್ಗೆ ಅಣಕು ಪ್ರದರ್ಶನ (ಪ್ರಾತ್ಯಾಕ್ಷಿಕತೆ)ವನ್ನು ನಡೆಸಲಾಯಿತು. ಈ ಅಣಕು ಪ್ರದರ್ಶನದಲ್ಲಿ ರಸ್ತೆಯಲ್ಲಿ ಅಪಘಾತ ಆದಾಗ ಹೇಗೆ ಜೀವರಕ್ಷಣೆ ಮಾಡಬೇಕೆಂದು "ಸರ್ವೇ" ತಂಡದವರು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಆಂಬುಲೆಂಸ್ಗೆ ಶಿಫ್ಟ್ ಮಾಡಿ ಆಸ್ಪತ್ರೆಗೆ ಕಳುಸುವ ಮೂಲಕ ಪ್ರದರ್ಶನವನ್ನು ನೀಡಿದ್ದರು.
ಈ ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದಶರ್ಿ ಎಂ.ಎ.ಷಕೀಬ್, ಇವರ ನೇತೃತ್ವದಲ್ಲಿ ಸರ್ವೇ ತಂಡದ ಹರಿ ಶಂಕರ್, ಉಮಾಮಹೇಶ್ವರಿ, ಇಜಾಝ್ ಅಹಮದ್, ಶಿವ ಸಾಗರ್, ಎಂ.ವಲಿ ಬಾಷಾ, ಕೆ.ನರಸಿಂಹ ರೆಡ್ಡಿ, ಮಂಜುನಾಥ್ ಮತ್ತು ಅನೇಕ ಸರ್ವೇ ತಂಡದವರು ಭಾಗಿಯಾಗಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 