ಬಳ್ಳಾರಿ: ಖಾತೆ ಯಾವುದಾದರೂ ತಕರಾರು ಇಲ್ಲ ಉಸ್ತುವಾರಿ ಮಾತ್ರ ನನಗೆ ಕೊಡಿ: ಆನಂದ್ ಸಿಂಗ್
ಲೋಕದರ್ಶನ ವರದಿ
ಬಳ್ಳಾರಿ 15: ಖಾತೆ ಯಾವುದು ಕೊಟ್ಟರೂ ನನ್ನ ತಕರಾರು ಇಲ್ಲ. ಆದರೆ, ಬಳ್ಳಾರಿ ಉಸ್ತುವಾರಿ ಮಾತ್ರ ನನಗೆ ಕೊಡಿ ಎಂದು ಕೇಳಿದ್ದೇನೆ ಎಂದು ನೂತನ ಸಚಿವ ಅನಂದ್ ಸಿಂಗ್ ತಿಳಿಸಿದ್ದಾರೆ.
ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಆನಂದ್ ಸಿಂಗ್, ಖಾತೆ ಬದಲಾವಣೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದೇನೆ ಎಂದು ಮಾಹಿತಿ ನೀಡಿದರು.
ರೆಡ್ಡಿಗಳ ವಿರುದ್ಧ ಬಳ್ಳಾರಿ ಉಸ್ತುವಾರಿ ಗಿಟ್ಟಿಸಿಕೊಳ್ಳಲು ಆನಂದ್ ಸಿಂಗ್ ಮುಂದಾಗಿದ್ದಾರೆ. ಸದ್ಯ ಲಕ್ಷ್ಮಣ ಸವದಿ ಅವರು ಬಳ್ಳಾರಿ ಉಸ್ತುವಾರಿ ಸಚಿವರಾಗಿದ್ದಾರೆ.
ಎಲ್ಲವೂ ಹೈಕಮಾಂಡ್ ಜತೆ ಚಚರ್ೆ ಮಾಡಿ ಫೈನಲ್ ಆಗುತ್ತದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದು, ಕಾಯಲು ಹೇಳಿದ್ದಾರೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಅವರ ನಿವಾಸ ಧವಳಗಿರಿಯಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಆನಂದ ಸಿಂಗ್. ಅರಣ್ಯ ಪರಿಸರ ಹಾಗೂ ಜೀವ ವಿಜ್ಞಾನ ಖಾತೆ ನೀಡದ್ದಕ್ಕೆ ಆನಂದ್ ಸಿಂಗ್ ಬೇಸರ ವ್ಯಕ್ತಪಡಿಸಿದರು.
ಅಕ್ರಮ ಗಣಿಗಾರಿಕೆ ಮತ್ತು ಅರಣ್ಯ ಒತ್ತುವರಿ ಆರೋಪಗಳನ್ನು ಎದುರಿಸುತ್ತಿರುವುದರಿಂದ ಆನಂದ್ ಸಿಂಗ್ ಗಣಿ ಮತ್ತು ಭೂ ವಿಜ್ಞಾನ ಬೇಡ ಎನ್ನುತ್ತಿದ್ದಾರೆ. ವಿಪಕ್ಷಗಳು ಇದನ್ನೇ ಅಸ್ತ್ರವಾಗಿ ಬಳಸಿಕೊಳ್ಳುತ್ತಾರೆ ಹೀಗಾಗಿ ಬೇಡ ಎಂದು ಮುಖ್ಯಮಂತ್ರಿ ಅವರಲ್ಲಿ ಅಲವತ್ತುಕೊಂಡಿರುವ ಆನಂದಸಿಂಗ್ ಅವರು, ಖಾತೆ ಬದಲಾಯಿಸಲು ಮನವಿ ಮಾಡಿಕೊಂಡಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 