ಬಳ್ಳಾರಿ: ಬಾರ್ ಆಂಡ್ ರೆಸ್ಟೋರೆಂಟ್ ಗಳ ಮೇಲೆ ಅನಿರೀಕ್ಷಿತ ದಾಳಿ
ಲೋಕದರ್ಶನ ವರದಿ
ಬಳ್ಳಾರಿ 06: ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) 1986 ಕಾಯ್ದೆಯ ಕಾಲಂ 3ರ ಅನ್ವಯ ಕಾಮರ್ಿಕ ನಿರೀಕ್ಷಕರಾದ ಎಂ ರವಿದಾಸ್ ಕುಡುತಿನಿ ಪಟ್ಟಣದಲ್ಲಿ ಶ್ವೇತ ಬಾರ್ ಆಂಡ್ ರೆಸ್ಟೋರೆಂಟ್ ಮೇಲೆ ಶುಕ್ರವಾರ ಅನಿರೀಕ್ಷಿತ ದಾಳಿ ನಡೆಸಿದರು.
ಈ ದಾಳಿಯ ಸಂದರ್ಭದಲ್ಲಿ ಶ್ವೇತ ಬಾರ್ ಆಂಡ್ ರೆಸ್ಟೋರೆಂಟ್ನಲ್ಲಿ 10 ವರ್ಷದ ಬಾಲಕನನ್ನು ಕೆಲಸಕ್ಕೆ ನೇಮಿಸಿಕೊಂಡು ದುಡಿಸಿಕೊಳ್ಳುವುದು ಕಂಡುಬಂದಿದ್ದು ಹೀಗಾಗಿ ಬಾಲ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ 1986 ಕಾಲಂ 3 ಯನ್ನು ಉಲ್ಲಂಘಿಸಿ ಸದರಿ ಕಾಯ್ದೆಯ 14(1)ರನ್ವಯ ಶಿಕ್ಷಾರ್ಹ ಅಪಾರಾಧವಾಗಿರುತ್ತದೆ.
ಈ ಬಗ್ಗೆ ಸದರಿ ಕಾಯ್ದೆಯಡಿ ಹತ್ತಿರದ ಠಾಣಾಧಿಕಾರಿ ಕುಡುತಿನಿ ಪೊಲೀಸ್ ಠಾಣೆಯಲ್ಲಿ ಭಾರ್ ಅಂಡ್ ರೆಸ್ಟೋರೆಂಟ್ ಮಾಲಿಕನ ಮೇಲೆ ಪ್ರಕರಣ ದಾಖಲಿಸಲಾಗಿದೆ.
14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇನ್ನು ಮುಂದೆ ಜಿಲ್ಲೆಯಲ್ಲಿ ಅನಿರೀಕ್ಷಿತ ದಾಳಿಗಳನ್ನು ನಡೆಸಲಾಗುವುದು ಎಂದು ಅವರು ತಿಳಿಸಿದರು.
ಬಾಲಕಾರ್ಮಿಕರನ್ನು ನೇಮಕ ಮಾಡಿಕೊಂಡ ಮಾಲೀಕರಿಗೆ ಕಾನೂನಿನಲ್ಲಿ 20,000/- ರಿಂದ 50,000/- ರವರೆಗೆ ದಂಡ ಅಥವಾ 06 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಇದೆ ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳು, ಕುಡುತಿನಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 