ಬಳ್ಳಾರಿ: ಬೆಳೆಗಳ ಬೆಲೆ ಸಮಸ್ಯೆ: ಸಕರ್ಾರಕ್ಕೆ ಶಿಫಾರಸ್ಸು
ಬಳ್ಳಾರಿ 19: ರೈತರ ಬೆಳೆಗಳ ಬೆಲೆ ಹಾಗೂ ಬೆಲೆ ಸಮಸ್ಯೆಗೆ ಸಂಬಂಧಿಸಿದಂತೆ ಕೃಷಿ ಬೆಲೆ ಆಯೋಗದಿಂದ ಸಕರ್ಾರಕ್ಕೆ ಶಿಫಾರಸ್ಸು ಮಾಡಲಾಗುವುದು ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕೃಷಿ, ತೋಟಗಾರಿಕೆ ಬೆಳೆಗಳ ಮಾರುಕಟ್ಟೆ, ಖರೀದಿ ಮತ್ತು ಬೆಲೆಗಳ ಕುರಿತ ವಿಚಾರ ತಜ್ಞರು, ರೈತ ಮುಖಂಡರು ಹಾಗೂ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದರು.
ವಿವಿಧ ಬೆಳೆಗಳ ಬೆಲೆಗೆ ಸಂಬಂಧಿಸಿದಂತೆ ಆಯೋಗ ಅಂತಿಮ ನಿರ್ಧಾರ ಕೈಗೊಳ್ಳಲು ಬರುವುದಿಲ್ಲ ಎಂದು ವಿವರಿಸಿದ ಅಧ್ಯಕ್ಷ ಹನುಮನಗೌಡ ಅವರು ಬೆಂಬಲ ಬೆಲೆ ಘೋಷಿಸಿದ ನಂತರ ರೈತರು ಮಾರುಕಟ್ಟೆಗೆ ಬರುವುದು ತುಂಬಾ ವಿರಳವಾಗಿದೆ. ಹಾಗಾಗೀ ನಮ್ಮ ಕೃಷಿ ಬೆಲೆ ಆಯೋಗದಿಂದ ರೈತರು ಬೆಳೆದ ಬೆಳೆಯನ್ನು ರೈತನ ಮನೆಯಿಂದ ನೇರವಾಗಿ ಖರೀದಿಸಿ ಅದನ್ನು ಎ.ಪಿ.ಎಂ.ಸಿ ಮಾರುಕಟ್ಟೆ ತರುವ ವ್ಯವಸ್ಥೆಯನ್ನು ಹಾಕಿಕೊಳ್ಳಲಾಗಿದ್ದು, ಈ ಶಿಫಾರಸ್ಸನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ರೈತಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 