ಬಳ್ಳಾರಿ: ಭಾರಿ ಮಳೆ: ರಾತ್ರಿಯಿಡಿ ಜನರ ಜಾಗರಣೆ
ಲೋಕದರ್ಶನ ವರದಿ
ಬಳ್ಳಾರಿ 23: ಗುಂಡಾ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಬುಧವಾರ ಭಾರಿ ಮಳೆ ಸುರಿದಿದ್ದರಿಂದ ಹಳ್ಳದ ನೀರು ಗಾಳೆಮ್ಮನಗುಡಿ ಗ್ರಾಮದ ಮನೆಗಳಿಗೆ ನುಗ್ಗಿದ್ದರಿಂದ ಸ್ಥಳೀಯರು ತೊಂದರೆ ಅನುಭವಿಸಿದರು.
ಗಾಳೆಮ್ಮನಗುಡಿ ಗ್ರಾಮ ತುಂಗಭದ್ರಾ ಹಿನ್ನೀರು ಪ್ರದೇಶದ ಅಂಚಿನಲ್ಲಿದೆ. ಗುಡ್ಡಾಗಾಡು ಪ್ರದೇಶದಿಂದ ಹರಿದು ಬರುವ ಮಳೆ ನೀರು ಗ್ರಾಮದ ಹೃದಯ ಭಾಗದಿಂದ ಹರಿದು ಜಲಾಶಯ ಸೇರುತ್ತದೆ. ಆದರೆ, ಭಾರಿ ಮಳೆಯಿಂದ ಹಳ್ಳದ ನೀರು ಮನೆಗಳಿಗೆ ನುಗ್ಗಿದ್ದರಿಂದ ರಾತ್ರಿಯಿಡಿ ಜನರು ಜಾಗರಣೆ ಮಾಡುವಂತಾಯಿತು.
ಮೂರು ವರ್ಷದಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಪೂರ್ಣಗೊಳ್ಳದಿರುವುದು ಸಮಸ್ಯೆಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಗಾಳೆಮನಗುಡಿ ಗ್ರಾಮದ ಮೂಲಕ ನಾಲ್ಕೈದು ಹಳ್ಳಗಳು ಹರಿದು ತುಂಗಭದ್ರಾ ಜಲಾಶಯದ ಹಿನ್ನೀರು ಸೇರುತ್ತದೆ. ಮೊದಲು ಹಳ್ಳದ ನೀರು ಬ್ರಿಡ್ಜ್ ಮೂಲಕ ಗ್ರಾಮದ ಹೃದಯ ಭಾಗದಿಂದ ಹರಿಯುತ್ತಿತ್ತು. ಆದರೆ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶುರುವಾದಗಿನಿಂದ ಒಂದಲ್ಲ ಒಂದು ಸಮಸ್ಯೆ ಕಾಣಿಸಿಕೊಳ್ಳುತ್ತಿವೆ ಎಂಬುದು ಇಲ್ಲಿನ ಜನರ ಆರೋಪ.
ಗ್ರಾಮದ ರಂಗಪ್ಪ, ಕುಮಾರ್, ಬೋಡ್ ರಾಜ, ಪರಸಪ್ಪ, ಗಣಪತಿ, ನಿಂಗಪ್ಪ, ನಾಗಮ್ಮ ಸೇರಿ ಹತ್ತಾರು ಮನೆಗಳಿಗೆ ಹಳ್ಳದ ನೀರು ನುಗ್ಗಿ ದವಸ ಧಾನ್ಯ ಸೇರಿ ಆಹಾರ ಪದಾರ್ಥಗಳು ನೀರು ಪಾಲಾಗಿವೆ. ನುಗ್ಗಿದ ನೀರಿನಿಂದ ರಾತ್ರಿಯಿಡಿ ನಿದ್ದೆ ಇಲ್ಲದೆ ವೃದ್ಧರು, ಮಕ್ಕಳು ಪರದಾಡಿದರು. ಅಲ್ಲದೆ, ತುಂಗಭದ್ರಾ ಜಲಾಶಯ ತುಂಬಿರುವುದರಿಂದ ಹುಳು-ಉಪ್ಪಡಿಗಳ ಭೀತಿ ಗ್ರಾಮಸ್ಥರಿಗೆ ಎದುರಾಗಿದೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 