ಬಳ್ಳಾರಿ: ಜೆಡಿಎಸ್ ಶಾಸಕರು ರಾಜೀನಾಮೆ ಕಾಲ್ಪನಿಕ
ಬಳ್ಳಾರಿ 13: ಜೆಡಿಎಸ್ ಪಕ್ಷದಿಂದ ಹಲವು ಶಾಸಕರು ರಾಜೀನಾಮೆ ನೀಡಲು ಹೊರಟ್ಟಿದ್ದಾರೆಂಬ ವಿಷಯ ಕಾಲ್ಪನಿಕವಾದದ್ದು ಭಿನ್ನಾಭಿಪ್ರಾಯದ ಮಾತು ಇರುವುದು ನಿಜ ನಾಯಕತ್ವದ ವಿರುದ್ದ ಬಿಟ್ಟು ಹೋದವರು ವೆಂಟಿಲೇಟರ್ ನಲ್ಲಿದ್ದಾರೆ. ಪಕ್ಷ ವಿರೋದಿ ಚಟುವಟಿಕೆ ಮಾಡುವ ಶಾಸಕರ ವಿರುದ್ದ ದೇವೇಗೌಡರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಿದ್ದೆವೆ ಎಂದು ಜೆಡಿಎಸ್ ರಾಜ್ಯ ಘಟಕದ ಅದ್ಯಕ್ಷ ಕುಮಾರಸ್ವಾಮಿ ಹೇಳಿದರು.
ಶುಕ್ರವಾರ ಸರ್ಕಾರಿ ಅಥಿತಿ ಗೃಹದಲ್ಲಿ ಸುದ್ಧಿಗಾರರೊಂದಿಗೆ ಮಾತಾನಾಡಿ ನಮ್ಮ ಪಕ್ಷದ ಶಾಸಕರಗಳು ರಾಜೀನಾಮೆ ನೀಡಲು ಬಿಜೆಪಿ ಪ್ರಚೋದನೆ ಇರಬಹುದು ಎಂದರು.
ರಾಜ್ಯದಲ್ಲಿ ಆಸ್ಥಿರತೆ ಕಾಡುತಿದೆ. ಅಭಿವೃದ್ಧಿ ಆಗುತ್ತಿಲ್ಲ ರಾಜ್ಯದ ಪರಿಸ್ಥಿತಿಯ ಬಗ್ಗೆ ಆಡಳಿತ ನೆಡೆಸುವವರು ಏನು ನೆಡೆಯತ್ತಿದೆ ಎಂಬುದನ್ನು ವಿರೋದ ಪಕ್ಷವಾದ ನಮಗೂ ಅಲ್ಲದಿದ್ದರೂ ಜನತೆಗೆ ಉತ್ತರ ಕೊಡಲಿ ಎಂದರು. ಕೇಂದ್ರ ಸರ್ಕಾರ ದೇಶದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಮುಂದಾಗಬೇಕಾಗಿದೆ ಎಂದರು. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಜೆಡಿಎಸ್ ಪಕ್ಷದ ಎಲ್ಲಾ ಘಟಕಗಳನ್ನು ಪುನರ್ ರಚಿಸಲಿದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಮೀನಳ್ಳಿ ತಾಯಣ್ಣ, ಕಿರಣ್ ಕುಮಾರ್, ವಿಜಯ್ ಕುಮಾರ್ ಸೇರಿದಂತೆ ಹಲವಾರು ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 