ಬಳ್ಳಾರಿ: ಲ್ಯಾಪ್ಟಾಪ್ ವಿತರಣೆ ಕಾರ್ಯಕ್ರಮ
ಲೋಕದರ್ಶನ ವರದಿ
ಬಳ್ಳಾರಿ 12: ವಿವೇಕರು ವಿಶ್ವಕ್ಕೆ ಕೀರ್ತಿ ತಂದ ಮಹಾನ್ ಗುರುಗಳು, ವಿದ್ಯಾರ್ಥಿಗಳು ವಿವೇಚನೆಯಿಂದ ಆಲೋಚನೆ ಮಾಡಿ ದೇಶಕ್ಕೆ ಒಳ್ಳೆಯ ಪೌರರಾಗಿ ಹೊರಹೊಮ್ಮಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮತ್ತು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಹೇಳಿದರು.
ನಗರದ ಸರಳಾದೇವಿ ಸತೀಶ್ಚಂದ್ರ ಅಗಾರ್ವಾಲ್ ಸರ್ಕಾರಿ ಪ್ರಥಮ ದಜರ್ೆ ಕಾಲೇಜ್(ಸ್ವಾಯತ್ತ)ನಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 157ನೇ ಜನ್ಮದಿನಾಚರಣೆ ಅಂಗವಾಗಿ ನಡೆದ ಉಚಿತ ಲ್ಯಾಪ್ಟಾಪ್ ವಿತರಣೆ ಹಾಗೂ ಕಾಲೇಜಿನ ಯವ ಸಬಲೀಕರಣ ಕೇಂದ್ರ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಲ್ಯಾಪ್ಟಾಪ್ ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಹೊಂದಬೇಕು. ಪೋಷಕರಿಗೆ ಹಾಗೂ ಗುರುಗಳಿಗೆ ಕೀತರ್ಿ ತರುವಂತಹ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ವಿವೇಕಾನಂದ ಆಶ್ರಮ ಸದಸ್ಯ, ಕೌಶಲ್ಯ ತರಬೇತಿದಾರರು, ಪ್ರೇರಣಾ ಮಾತುಗಾರ, ಬರಹಗಾರ ಜೆ.ಸಿ.ರಾಜಶೇಖರ ವಿಶೇಷ ಉಪನ್ಯಾಸ ನೀಡಿ, ನಮ್ಮ ದೇಶವನ್ನು ಕಟ್ಟಬೇಕಾದವರು ನಾವೇ, ದೇಶ ಕಟ್ಟಲು ಸೋಮರಿಗಳಿಂದ, ಮೂರ್ಖರಿಂದ ಸಾಧ್ಯವಿಲ್ಲ, ಸಜ್ಜನಿಕೆಯಿಂದ ಹಾಗೂ ಯುವ ಜನತೆಯಿಂದ ಸಾಧ್ಯವಾಗುತ್ತದೆ ಎಂದು ಹೇಳಿದರು. ಪ್ರತಿಯೊಬ್ಬರು ವಿವೇಕಾನಂದರ ವಿಚಾರಗಳನ್ನು ಅಧ್ಯಯನ ಮಾಡಬೇಕು. ಬಡವರನ್ನು, ದಲಿತರನ್ನು ಮೇಲಿತ್ತುವ ಕೆಲಸ ಮಾಡಬೇಕು. ಏಳಿ ಎದ್ದೇಳಿ ಕಾರ್ಯನ್ಮುಕರಾಗಿ, ಶ್ರದ್ಧಾವಂತರಾಗಿ ದೇಶದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಿ ಎಂದರು. ಅದ್ಬುತ ಸಮಯವನ್ನು ಮೊಬೈಲ್ ಕಳೆಯುವ ಬದಲು ದೇಶ ಕಟ್ಟುವದಡೆಗೆ ಮುನ್ನುಗ್ಗಿ, ಯಾವುದಕ್ಕೆ ಅಂಜದೇ, ಅಳುಕದೇ ಸಾಧಿಸಿ ಎಂದರು. ಪರರಲ್ಲಿ ನಂಬಿಕೆಯಿಡುವ ಬದಲಾಗಿ ನಿಮ್ಮಲ್ಲಿ ನಂಬಿಕೆ ಇಟ್ಟಾಗ ಮಾತ್ರ ಸಾಧನೆಯ ಶಿಖರಕ್ಕೆ ಏರಬಹುದು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎ.ಹೇಮಣ್ಣ ಅಧ್ಯಕ್ಷತೆವಹಿಸಿ ಮಾತನಾಡಿ, ವಿದ್ಯಾಥರ್ಿಗಳು ವಿವೇಕಾನಂದರ ಆದರ್ಶಗಳನ್ನು ಅಳವಡಿಸಿಕೊಳ್ಳಿರಿ, ಜೀವನದಲ್ಲಿ ಯಶಸ್ಸು ಕಾಣಲು ಸತತ ಪ್ರಯತ್ನ ಅಗತ್ಯ. ಜಾತಿ ಪ್ರಾದೇಶಿಕತೆ ಬಿಟ್ಟು ದೇಶವನ್ನು ಕಟ್ಟಬೇಕು ಎಂದು ಕಿವಿಮಾತು ಹೇಳಿದರು.
ಎನ್.ಎಸ್.ಎಸ್ ವಿದ್ಯಾಥರ್ಿಗಳಿಂದ ಸ್ವಾಮಿ ವಿವೇಕಾನಂದರ 157ನೇ ಜನ್ಮದಿನಾಚರಣೆ ಪ್ರಯುಕ್ತ ಜಾಥಾ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಪ್ರಥಮ ವರ್ಷದ ವಿದ್ಯಾಥರ್ಿಗಳಿಗೆ ಕಾರ್ಯಕ್ರಮದಲ್ಲಿ ಲ್ಯಾಪ್ಟಾಪ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿ ಅಭಿವೃದ್ಧಿಯ ಸಮಿತಿಯ ಸದಸ್ಯರು, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಇದ್ದರು. ಕನ್ನಡ ವಿಭಾಗದ ಮುಖ್ಯಸ್ಥ ದೇವಣ್ಣ.ಸಿ ನಿರೂಪಿಸಿದರು. ಪರೀಕ್ಷಾ ನಿಯಂತ್ರಕ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಶ್ರೀನಿವಾಸಮೂತರ್ಿ ಸ್ವಾಗತಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 