ಬಳ್ಳಾರಿ: ಸಚಿವ ಸ್ಥಾನದ ಆಶಾವಾದಿ: ಕರುಣಾಕರರೆಡ್ಡಿ
ಲೋಕದರ್ಶನ ವರದಿ
ಬಳ್ಳಾರಿ 19: ನನಗೂ ಸಚಿವ ಸ್ಥಾನ ಕಲ್ಪಿಸುವಂತೆ ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠದ ಹತ್ತಿರ ಮನವಿ ಮಾಡಿದ್ದು, ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಆಶಾವಾದಿಯಾಗಿರುವುದಾಗಿ ಶಾಸಕ ಜಿ.ಕರುಣಾಕರರೆಡ್ಡಿ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ರಾಜ್ ಸಂಸ್ಥೆಗಳ ಸಮಿತಿ ಸಭೆಯ ನಂತರ ಮಾತನಾಡಿದರು.
ಹರಪನಳ್ಳಿಯನ್ನು ಜಿಲ್ಲೆ ಮಾಡಬೇಕೆಂಬ ಒತ್ತಾಯವಿದೆ. ಈ ಕುರಿತು ಸಂಘ-ಸಂಸ್ಥೆಗಳ ಮುಖಂಡರು, ಹೋರಾಟಗಾರರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ನಿರ್ಧರಿಸಿದ್ದು, ಸಮಯ ಕೇಳಿದ್ದೇವೆ ಎಂದು ವಿವರಿಸಿದರು.
ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಜಿಲ್ಲೆ ರಚಿಸಬೇಕೆಂಬುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಒಂದು ಸಭೆಯಾಗಿದ್ದು, ಪರ-ವಿರೋಧ ಅಂಶಗಳು ವ್ಯಕ್ತವಾಗಿವೆ. ಆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಉಪಚುನಾವಣೆಯ ನಂತರ ಜಿಲ್ಲೆಯ ಶಾಸಕರು,ಮಾಜಿ ಶಾಸಕರು,ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಹೋರಾಟಗಾರರು ಸೇರಿದಂತೆ ಸರ್ವರ ಅಭಿಪ್ರಾಯ ಆಲಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ರಾಜ್ ಸಂಸ್ಥೆಗಳ ಸಮಿತಿ ಸದಸ್ಯರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 