ಬಳ್ಳಾರಿ: ಜಿಲ್ಲಾಧಿಕಾರಿಯಾಗಿ ನಕುಲ್ ಅಧಿಕಾರ ಸ್ವೀಕಾರ
ಲೋಕದರ್ಶನ ವರದಿ
ಬಳ್ಳಾರಿ 19: ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಎಸ್.ಎಸ್.ನಕುಲ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿಗಳಾದ ಜಿಪಂ ಸಿಇಒ ಕೆ.ನಿತೀಶ್ ಅವರು ಅಧಿಕಾರ ಹಸ್ತಾಂತರಿಸಿದರು.
ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿತ್ತು. ಅವರ ಜಾಗಕ್ಕೆ ಎಸ್.ಎಸ್.ನಕುಲ್ ಅವರನ್ನು ನೇಮಿಸಿತ್ತು.
ಈ ಮುಂಚೆ ನಕುಲ್ ಅವರು ಬಳ್ಳಾರಿ ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಬಳ್ಳಾರಿ ಜಿಲ್ಲಾಧಿಕಾರಿಯಾಗಿ 3 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಅಧಿಕಾರ ಸ್ವೀಕರಿಸಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಶುಭಾಷಯ ಕೋರಿದರು. ನಂತರ ಅವರು ಅಧಿಕಾರಿಗಳ ಸಭೆ ನಡೆಸಿ ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 