ಬಳ್ಳಾರಿ: ನೋಟರಿಯವರ ಸೇವೆ ಅಪೂರ್ವ ಕೊಡುಗೆ
ಲೋಕದರ್ಶನ ವರದಿ
ಬಳ್ಳಾರಿ 25: ನೋಟರಿಯವರ ಸೇವೆ ನ್ಯಾಯಾಂಗ ಮತ್ತು ಸರ್ಕಾರಕ್ಕೆ ಸಲ್ಲುವ ಅಪೂರ್ವ ಕೊಡುಗೆಯಾಗಿದೆ. ಇದು ಪವಿತ್ರವಾದ ಹುದ್ದೆಯಾಗಿದ್ದು ಸಾರ್ವಜನಿಕರಿಗೆ ಸದುಪಯೋಗವಾಗಿದೆ ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಖಾಸೀಂ ಚೂರಿಖಾನ್ ಅವರು ಹೇಳಿದರು. ಜಿಲ್ಲಾ ಗೌರವಾನ್ವಿತ ನೋಟರಿಗಳ ವೇದಿಕೆ ಮತ್ತು ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದ ವತಿಯಿಂದ ಇತ್ತಿಚೆಗೆ ನಗರದ ಕೋರ್ಟ ಆವರಣದಲ್ಲಿ ಆಯೋಜಿಸಿದ ಕಾನೂನು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಯಧೀಶರ ಈ ಕಾರ್ಯ ನಿರ್ವಹಣೆಯ ವ್ಯಾಪ್ತಿ ಹೆಚ್ಚಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್.ಮಲ್ಲೂರು ಮಾತನಾಡಿ, ನೋಟರಿಯವರ ಜವಾಬ್ದಾರಿಯು ಪಬ್ಲಿಕ್ ಅಫೀಷಿಯಲ್ ಅಧಿಕಾರಿ ಎಂದರು.
ಈ ಸಂದರ್ಭದಲ್ಲಿ ನೋಟರಿ ಅಸೋಸಿಯೇಷನ್ನ ಮಾಜಿ ರಾಜ್ಯಾಧ್ಯಕ್ಷರು ಹಾಗೂ ಅಖಿಲ ಭಾರತ ನೋಟರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಆಸಿಫ್ ಅಲಿ, ಕೆ.ಚನ್ನಪ್ಪ, ಡಾ.ಎಚ್. ರಾಘವೇಂದ್ರಚಾರ್ ಅವರು ಮಾತನಾಡಿದರು. ವಕೀಲರಾದ ಬಿ.ರಾಘವೇಂದ್ರ ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವಕೀಲರು ಸೇರಿದಂತೆ ಇತರರು ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 