ಬಳ್ಳಾರಿ: ಸಚಿವ ಮಾಧುಸ್ವಾಮಿ ವಿರುದ್ಧ ಪ್ರತಿಭಟನೆ
ಲೋಕದರ್ಶನ ವರದಿ
ಬಳ್ಳಾರಿ 22: ಹೊಸದುರ್ಗ ಕನಕ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಅವರನ್ನು ಉದ್ದೇಶಿಸಿ ಏಕವಚನದಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ನಿಂದಿಸಿದ್ದಾರೆ ಎಂದು ಆರೋಪಿಸಿ, ಕುರುಬ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು.
ಹುಳಿಯಾರು ಪಟ್ಟಣದ ಕನಕವೃತ್ತ ತೆರವು ವಿಚಾರದಲ್ಲಿ ಹೊಸದುರ್ಗ ಕನಕ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಅವರನ್ನು ಉದ್ದೇಶಿಸಿ ಏಕವಚನದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ನಿಂದಿಸಿದ್ದಾರೆ ಎಂದು ಆರೋಪಿಸಿ ನಗರದಲ್ಲಿಂದು ಕುರುಬ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದ್ರು.ಸಚಿವ ಮಾಧುಸ್ವಾಮಿ ವಿರುದ್ಧ ಬಳ್ಳಾರಿಯಲ್ಲಿ ಕುರುಬ ಸಮುದಾಯದ ಪ್ರತಿಭಟನೆಗಡಗಿ ಚನ್ನಪ್ಪ ವೃತ್ತದ ಬಳಿ ಎಂ.ಜಿ.ಕನಕ ನೇತೃತ್ವದಲ್ಲಿ ಹತ್ತಾರು ಕುರುಬ ಸಮುದಾಯದ ಯುವಕರು ಜಮಾಯಿಸಿ ಕೆಲಕಾಲ ಸಚಿವರ ವಿರುದ್ಧ ಘೋಷಣೆ ಕೂಗಿದರು.
ಕೂಡಲೇ ಸಚಿವರು ಈಶ್ವರಾನಂದಪುರಿ ಸ್ವಾಮೀಜಿ ಬಳಿ ಹೋಗಿ ಬಹಿರಂಗವಾಗಿಯೇ ಕ್ಷಮೆಯಾಚಿಸಬೇಕು. ಇಲ್ಲವಾದರೆ ಕುರುಬ ಸಮುದಾಯದ ಪ್ರಬಲ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಕುರುಬ ಸಮುದಾಯದ ಯುವ ಮುಖಂಡ ಕೆ.ನಾಗರಾಜ ಬಂಡಿಹಟ್ಟಿ, ಗುಗ್ಗರಹಟ್ಟಿ ಶ್ರೀಕಾಂತ, ಅಮರಾಪುರ ಮಂಜುನಾಥ, ಕೋರ್ಟ ಮೋಹನ, ಕೊಳಗಲ್ಲು ವಿನಯ ಕುಮಾರ, ಕಕ್ಕಬೇವಿನಹಳ್ಳಿ ಹೊನ್ನಪ್ಪ ಸೇರಿದಂತೆ ಇತರರು ಆಗ್ರಹಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 