ಬಳ್ಳಾರಿ: ಜಿಲ್ಲಾ ಸಂಕೀರ್ಣ ಕಟ್ಟಡದ ವಿನ್ಯಾಸ ಮಾಹಿತಿ ಒದಗಿಸಿ: ಎಡಿಸಿ ಮಂಜುನಾಥ
ಲೋಕದರ್ಶನ ವರದಿ
ಬಳ್ಳಾರಿ 05: ನಗರದಲ್ಲಿ ನಿಮರ್ಿಸಲಾಗುತ್ತಿರುವ ಜಿಲ್ಲಾ ಸಂಕೀರ್ಣ ಕಟ್ಟಡದ ವಿನ್ಯಾಸ ಅಂತಿಮಗೊಳಿಸುವಿಕೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಅಪರ ಜಿಲ್ಲಾಧಿಕಾರಿ ಮಂಜುನಾಥ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಜೆ ನಡೆಯಿತು.
ಜಿಲ್ಲಾ ಸಂಕೀರ್ಣ ಕಟ್ಟಡ ಕಾಮಗಾರಿ ಭರದಿಂದ ಸಾಗಿದೆ. ಈ ಕಟ್ಟಡದ ವಿನ್ಯಾಸ ಅಂತಿಮಗೊಳಿಸಲಾಗುತ್ತಿದ್ದು, ಸರಕಾರಿ ಇಲಾಖೆಗಳು ತಮಗೆ ಅಗತ್ಯವಿರುವಷ್ಟು ವಿಸ್ತೀರ್ಣದ ಮಾಹಿತಿಯನ್ನು ಕೂಡಲೇ ಒಪ್ಪಿಸಬೇಕು ಎಂದರು.
ನಮ್ಮ ಇಲಾಖೆಯ ಸ್ವಂತ ಕಟ್ಟಡವಿದೆ;ಈ ಜಿಲ್ಲಾ ಸಂಕೀರ್ಣ ಕಟ್ಟಡದಲ್ಲಿ ನಮಗೆ ಅವಕಾಶ ಬೇಡ ಎಂದು ಹೇಳುವವರು ಲಿಖಿತವಾಗಿ ಸಲ್ಲಿಸಿದಲ್ಲಿ ಅದನ್ನು ಬೇರೆ ಅಗತ್ಯವಿರುವ ಇಲಾಖೆಗಳಿಗೆ ನೀಡಲಾಗುವುದು ಎಂದು ಅವರು ಹೇಳಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಗೆ ಅಗತ್ಯವಿರುವ ವಿಸ್ತೀರ್ಣದ ಮಾಹಿತಿಯನ್ನು ಈ ಸಂದರ್ಭದಲ್ಲಿ ಒದಗಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಗೃಹಮಂಡಳಿ ಅಧಿಕಾರಿಗಳಾದ ಶಿವಶಂಕರ, ದತ್ತಾತ್ರೇಯ ಶೆಟ್ಟಿ, ಡಿಯುಡಿಸಿ ಅಧಿಕಾರಿ ರಮೇಶ, ಸಹಕಾರ ಇಲಾಖೆಯ ಉಪನಿಬಂಧಕಿ ಡಾ.ಸುನೀತಾ ಸಿದ್ರಾಮ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 