ಬಳ್ಳಾರಿ: ಜಿಲ್ಲಾ ಸಂಕೀರ್ಣ ಕಟ್ಟಡದ ವಿನ್ಯಾಸ ಮಾಹಿತಿ ಒದಗಿಸಿ: ಎಡಿಸಿ ಮಂಜುನಾಥ
ಲೋಕದರ್ಶನ ವರದಿ
ಬಳ್ಳಾರಿ 05: ನಗರದಲ್ಲಿ ನಿಮರ್ಿಸಲಾಗುತ್ತಿರುವ ಜಿಲ್ಲಾ ಸಂಕೀರ್ಣ ಕಟ್ಟಡದ ವಿನ್ಯಾಸ ಅಂತಿಮಗೊಳಿಸುವಿಕೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಅಪರ ಜಿಲ್ಲಾಧಿಕಾರಿ ಮಂಜುನಾಥ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಜೆ ನಡೆಯಿತು.
ಜಿಲ್ಲಾ ಸಂಕೀರ್ಣ ಕಟ್ಟಡ ಕಾಮಗಾರಿ ಭರದಿಂದ ಸಾಗಿದೆ. ಈ ಕಟ್ಟಡದ ವಿನ್ಯಾಸ ಅಂತಿಮಗೊಳಿಸಲಾಗುತ್ತಿದ್ದು, ಸರಕಾರಿ ಇಲಾಖೆಗಳು ತಮಗೆ ಅಗತ್ಯವಿರುವಷ್ಟು ವಿಸ್ತೀರ್ಣದ ಮಾಹಿತಿಯನ್ನು ಕೂಡಲೇ ಒಪ್ಪಿಸಬೇಕು ಎಂದರು.
ನಮ್ಮ ಇಲಾಖೆಯ ಸ್ವಂತ ಕಟ್ಟಡವಿದೆ;ಈ ಜಿಲ್ಲಾ ಸಂಕೀರ್ಣ ಕಟ್ಟಡದಲ್ಲಿ ನಮಗೆ ಅವಕಾಶ ಬೇಡ ಎಂದು ಹೇಳುವವರು ಲಿಖಿತವಾಗಿ ಸಲ್ಲಿಸಿದಲ್ಲಿ ಅದನ್ನು ಬೇರೆ ಅಗತ್ಯವಿರುವ ಇಲಾಖೆಗಳಿಗೆ ನೀಡಲಾಗುವುದು ಎಂದು ಅವರು ಹೇಳಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಗೆ ಅಗತ್ಯವಿರುವ ವಿಸ್ತೀರ್ಣದ ಮಾಹಿತಿಯನ್ನು ಈ ಸಂದರ್ಭದಲ್ಲಿ ಒದಗಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಗೃಹಮಂಡಳಿ ಅಧಿಕಾರಿಗಳಾದ ಶಿವಶಂಕರ, ದತ್ತಾತ್ರೇಯ ಶೆಟ್ಟಿ, ಡಿಯುಡಿಸಿ ಅಧಿಕಾರಿ ರಮೇಶ, ಸಹಕಾರ ಇಲಾಖೆಯ ಉಪನಿಬಂಧಕಿ ಡಾ.ಸುನೀತಾ ಸಿದ್ರಾಮ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 