ಬಳ್ಳಾರಿ: ಜಿಲ್ಲಾ ಸಂಕೀರ್ಣ ಕಟ್ಟಡದ ವಿನ್ಯಾಸ ಮಾಹಿತಿ ಒದಗಿಸಿ: ಎಡಿಸಿ ಮಂಜುನಾಥ
ಲೋಕದರ್ಶನ ವರದಿ
ಬಳ್ಳಾರಿ 05: ನಗರದಲ್ಲಿ ನಿಮರ್ಿಸಲಾಗುತ್ತಿರುವ ಜಿಲ್ಲಾ ಸಂಕೀರ್ಣ ಕಟ್ಟಡದ ವಿನ್ಯಾಸ ಅಂತಿಮಗೊಳಿಸುವಿಕೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಅಪರ ಜಿಲ್ಲಾಧಿಕಾರಿ ಮಂಜುನಾಥ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಜೆ ನಡೆಯಿತು.
ಜಿಲ್ಲಾ ಸಂಕೀರ್ಣ ಕಟ್ಟಡ ಕಾಮಗಾರಿ ಭರದಿಂದ ಸಾಗಿದೆ. ಈ ಕಟ್ಟಡದ ವಿನ್ಯಾಸ ಅಂತಿಮಗೊಳಿಸಲಾಗುತ್ತಿದ್ದು, ಸರಕಾರಿ ಇಲಾಖೆಗಳು ತಮಗೆ ಅಗತ್ಯವಿರುವಷ್ಟು ವಿಸ್ತೀರ್ಣದ ಮಾಹಿತಿಯನ್ನು ಕೂಡಲೇ ಒಪ್ಪಿಸಬೇಕು ಎಂದರು.
ನಮ್ಮ ಇಲಾಖೆಯ ಸ್ವಂತ ಕಟ್ಟಡವಿದೆ;ಈ ಜಿಲ್ಲಾ ಸಂಕೀರ್ಣ ಕಟ್ಟಡದಲ್ಲಿ ನಮಗೆ ಅವಕಾಶ ಬೇಡ ಎಂದು ಹೇಳುವವರು ಲಿಖಿತವಾಗಿ ಸಲ್ಲಿಸಿದಲ್ಲಿ ಅದನ್ನು ಬೇರೆ ಅಗತ್ಯವಿರುವ ಇಲಾಖೆಗಳಿಗೆ ನೀಡಲಾಗುವುದು ಎಂದು ಅವರು ಹೇಳಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಗೆ ಅಗತ್ಯವಿರುವ ವಿಸ್ತೀರ್ಣದ ಮಾಹಿತಿಯನ್ನು ಈ ಸಂದರ್ಭದಲ್ಲಿ ಒದಗಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಗೃಹಮಂಡಳಿ ಅಧಿಕಾರಿಗಳಾದ ಶಿವಶಂಕರ, ದತ್ತಾತ್ರೇಯ ಶೆಟ್ಟಿ, ಡಿಯುಡಿಸಿ ಅಧಿಕಾರಿ ರಮೇಶ, ಸಹಕಾರ ಇಲಾಖೆಯ ಉಪನಿಬಂಧಕಿ ಡಾ.ಸುನೀತಾ ಸಿದ್ರಾಮ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 