ಬಳ್ಳಾರಿ: ಯೋಗದಿಂದ ಸದೃಢ ದೇಹ ಸಾಧ್ಯ
ಲೋಕದರ್ಶನ ವರದಿ
ಬಳ್ಳಾರಿ 17: ನಗರದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಫಿಟ್ ಇಂಡಿಯಾ ಸಪ್ತಾಹ ಪ್ರಯುಕ್ತ 7ದಿವಸಗಳ ಕಾಲ ವಿದ್ಯಾರ್ಥಿನಿಯರಿಗೆ ಜಿಲ್ಲಾ ಪತಂಜಲಿ ಯೋಗ ಸಮಿತಿಯವರು ಯೋಗಾಭ್ಯಾಸ ಹಮ್ಮಿಕೊಳ್ಳಲಾಗಿತ್ತು.
ಶಿಬಿರದ ಉದ್ಘಾಟಿಸಿದ ಜಿಲ್ಲಾ ಪತಂಜಲಿ ಸಂಯೋಜಕ ಇಸ್ವಿ ಪಂಪಾಪತಿ ಮಾತನಾಡಿ, ಸದೃಢ ದೇಹ, ಪರಿಶುದ್ದವಾದ ಮನಸ್ಸು, ಆತ್ಮಸೈರ್ಯಬೇಕೆಂದರೆ ಅದು ಯೋಗದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.
ಜಿಲ್ಲಾ ಪತಂಜಲಿ ಮಾಜಿ ಅಧ್ಯಕ್ಷ ಎಸ್.ಸಿ.ಪುರಾಣಿಕ್ ಅವರು ವಿದ್ಯಾರ್ಥಿನಿಯವರಿಗೆ ಭಜನೆ ಮತ್ತು ಹಾಸ್ಯಾಸನವನ್ನು ಮಾಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲೆಯ ಮುಖ್ಯೋಪಾದ್ಯಾಯಿನಿ ಕುಮದಿನಿ ಮಾತನಾಡಿ, ನಿತ್ಯಾ ಯೋಗಾಭ್ಯಾಸ ಮಾಡಿ ಇದರ ಉಪಯೋಗವನ್ನು ಪಡೆದು ಒಳ್ಳೆಯ ದೇಶದ ಪ್ರಜೆಯಾಗಿ ಸಮೃದ್ಧ ಭಾರತ ನಿಮರ್ಿಸುವುದಕ್ಕೆ ಇದು ಒಂದು ಸುಂದರ ಅವಕಾಶ ಇದನ್ನು ಪ್ರತಿಯೊಬ್ಬ ವಿದ್ಯಾರ್ಥಿನಿಯರು ಲಾಭ ಪಡೆಯಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಂಯೋಜಕ ಕಣೆಕಲ್ ಯರ್ರಿಸ್ವಾಮಿ, ಕಿಸಾನ್ ಪಂಚಾಯತ್ ಅಧ್ಯಕ್ಷರಾದ ಚಂದ್ರಗೌಡ್ರು, ಯೋಗ ಶಿಕ್ಷಕಿಯಾದ ಕಲ್ಪನಾ, ಮತ್ತು ಶಾಲೆಯ ಸಿಬ್ಬಂದಿ ವರ್ಗದವರು ಹಾಗೂ 500 ವಿದ್ಯಾಥರ್ಿಗಳು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 