ಬಳ್ಳಾರಿ: ಯುವ ವಿಜ್ಞಾನಿಗಳ ಸಮಾವೇಶ
ಲೋಕದರ್ಶನ ವರದಿ
ಬಳ್ಳಾರಿ 11: ವಿದ್ಯಾಥರ್ಿಗಳು ಅಂಕಗಳಿಗಿಂತ ಜ್ಞಾನಗಳಿಕೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಇಸ್ರೋ ನಿವೃತ್ತ ವಿಜ್ಞಾನಿ ಪ್ರೊ.ಸಿ.ಡಿ.ಪ್ರಸಾದ್ ಹೇಳಿದರು.
ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವೀರಶೈವ ವಿದ್ಯಾವರ್ಧಕ ಸಂಘ ನಗರದ ಹೊರವಲಯದ ಎಸ್.ಕೆ.ಮೋದಿ ನ್ಯಾಷನಲ್ ಸ್ಕೂಲ್ನಲ್ಲಿ ಆಯೋಜಿಸಿರುವ ಎರಡು ದಿನಗಳ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
ಶಿಕ್ಷಕರು, ಪಾಲಕರು ಮತ್ತು ವಿದ್ಯಾಥರ್ಿಗಳು ಸಹಯೋಗದಲ್ಲೇ ಶಿಕ್ಷಣ ಉತ್ತಮಗೊಳ್ಳುತ್ತದೆ. ಪಠ್ಯದಲ್ಲಿ ಇರುವುದನ್ನು ಸುಮ್ಮನೆ ಹೇಳಿದರಷ್ಟೇ ಸಾಲದು, ವಿಭಿನ್ನ, ಹೊಸದನ್ನು ಹೇಳುವ ಕಲೆ ಶಿಕ್ಷಕರು ಕರಗತ ಮಾಡಿಕೊಳ್ಳಬೇಕು. ಪಾಲಕರು ಮನೆಯಲ್ಲಿ ಕಲಿಕೆಯ ವಾತಾವರಣ ನಿಮರ್ಿಸಬೇಕು. ವಿದ್ಯಾಥರ್ಿಗಳು ಶಾಲೆಗೆ ಬಂದು ಓದಿ ಪರೀಕ್ಷೆ ಪಾಸಾದರೆ ಸಾಲದು, ಜ್ಞಾನಾರ್ಜನೆಯನ್ನೇ ಪ್ರಮುಖ ಗುರಿಯಾಗಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ವೀವಿ ಸಂಘದ ಗೌರವ ಕಾರ್ಯದಶರ್ಿ ಚೋರನೂರು ಕೊಟ್ರಪ್ಪ ಮಾತನಾಡಿದರು. ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದಶರ್ಿ ಗಿರೀಶ್ ಕಡ್ಲೆವಾಡ, ಸಮಾವೇಶದ ಸಂಚಾಲಕ ಎಚ್.ಜಿ.ಹುದ್ದಾರ್, ಸ್ಕೂಲ್ನ ಆಡಳಿತ ಮಂಡಳಿ ಅಧ್ಯಕ್ಷ ಏಚರೆಡ್ಡಿ ಸತೀಶ್ ಇತರರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 