ಶನಿವಾರದಿಂದ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಜಾತ್ರೆ
ಬಳ್ಳಾರಿ, ಜ 31,ಗಡಿನಾಡು ಬಳ್ಳಾರಿ ಶನಿವಾರ ಮತ್ತು ಭಾನುವಾರದ ಎರಡು ದಿನಗಳ ಕನ್ನಡ ಜಾತ್ರೆಗೆ ಸಜ್ಜಾಗುತ್ತಿದೆ. ನಗರದಲ್ಲಿ ಕನ್ನಡ ಸಾಹಿತ್ಯದ ಸಡಗರ ಸಂಭ್ರಮ ಮನೆ ಮಾಡಲಿದೆ. ಡಾ|| ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು. ಇದಕ್ಕಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಕನ್ನಡದ ಕೆಂಪು ಮತ್ತು ಹಳದಿ ಬಾವುಟಗಳು ರಾರಾಜಿಸುತ್ತಿವೆ.
ಹಳದಿ ಮತ್ತು ಕೆಂಪು ಬಣ್ಣದ ಬಾವುಗಳಿಂದ ನಗರ ಕಂಗೊಳಿಸುತ್ತಿದ್ದು, ಕನ್ನಡದ ತೇರಿಗಾಗಿ ಸಿಂಗಾರಗೊಳ್ಳುತ್ತಿದೆ. ಪ್ರೊ|| ಶಂಭು ಬಳಿಗಾರ ನುಡಿ ಜಾತ್ರೆಗೆ ಚಾಲನೆ ನೀಡಲಿದ್ದಾರೆಕನ್ನಡ ಭವನದಿಂದ ರಂಗಮಂದಿರದವರೆಗೆ ತಾಯಿ ಭುವನೇಶ್ವರಿ ಮೆರವಣಿಗೆ ನಡೆಯಲಿದ್ದು, ವಿವಿಧ ಜನಪದ ಕಲಾತಂಡಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾಹಿತ್ಯಾಭಿಮಾನಿಗಳು ಅದ್ದೂರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದ ಅಧ್ಯಕ್ಷ ಡಾ.ಜೆ.ಎಂ.ನಾಗಯ್ಯ ಅಧ್ಯಕ್ಷೀಯ ಭಾಷಣ ಮಾಡಲಿದ್ದು, ಶಾಸಕ ಸೋಮಶೇಖರರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರ. ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ 7 ಕೃತಿಗಳ ಲೋಕಾರ್ಪಣೆ ಮಾಡಲಾಗುತ್ತಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಮ್ಮೇಳನದಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಶೇ.100ರಷ್ಟು ಅಂಕ ಪಡೆದ ಜಿಲ್ಲೆಯ 125 ವಿದ್ಯಾರ್ಥಿಗಳಿಗೆ. ಜೊತೆಗೆ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 41 ಜನರಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಕನ್ಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದರಾಮ ಕಲ್ಮಠ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 