ಬಳ್ಳಾರಿ; ಲಾರಿ ಪಲ್ಟಿ 10 ಗಣಿ ಕಾಮರ್ಿಕರಿಗೆ ಗಾಯ
ಬಳ್ಳಾರಿ 22: ಅದಿರು ಸಾಗಿಸುತಿದ್ದ ಲಾರಿ ಪಲ್ಟಿಯಾಗಿ 10 ಗಣಿ ಕಾಮರ್ಿಕರು ಗಾಯಗೊಂಡಿರುವ ಘಟನೆ ಹೊಸಪೇಟೆ ಹೊರವಲಯದಲ್ಲಿ ನಡೆದಿದೆ.
ಪಿ.ಬಿ.ಎಸ್ ಗಣಿಯಲ್ಲಿ ಶನಿವಾರ ಸಂಜೆ ಘಟನೆ ನಡೆದಿದ್ದು ಗಾಯಾಳುಗಳನ್ನು ಇಂಗಳಗಿ ಗ್ರಾಮದವರು ಎನ್ನಲಾಗಿದೆ.
ಕೆಲಸ ಮುಗಿಸಿದ್ದ ಕಾಮರ್ಿಕರಿಗೆ ಮನೆಗೆ ತೆರಳಲು ಯಾವುದೇ ಪ್ರತ್ಯೇಕ ವ್ಯವಸ್ಥೆ ಇಲ್ಲದ ಕಾರಣ, ಅದಿರು ಸಾಗಿಸುತ್ತಿದ್ದ ಲಾರಿಯಲ್ಲೇ ಮನೆಯತ್ತ ಹೊರಟಿದ್ದರು. ಗಾಯಾಳುಗಳನ್ನು ಹೊಸಪೇಟೆ ಸಕರ್ಾರಿ ನೂರು ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಲಕ್ಷ್ಮಮ್ಮ ಮತ್ತು ಕುರಿ ಜಂಬುನಾಥ ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 