ಭಟ್ಟಿ ಸಾರಾಯಿ ಘಟಕಕ್ಕೆಅಬಕಾರಿ ಇಲಾಖೆ ದಾಳಿ
ಮಂಗಳೂರು, ಏ.9,ಅಬಕಾರಿ ಇಲಾಖೆ ಅಧಿಕಾರಿಗಳು, ಮಂಗಳೂರಿನ ಜಪ್ಪಿನಮೊಗರು ಗ್ರಾಮದ ನ್ಯೂ ಪಡ್ಪು ಎಂಬಲ್ಲಿ ರಿಚರ್ಡ್ ಡಿಸೋಜಾ ಎಂಬವರ ಮನೆ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ಭಟ್ಟಿ ಸಾರಾಯಿ ತಯಾರಿಸುತ್ತಿದ್ದುದನ್ನು ಪತ್ತೆ ಹಚ್ಚಿದ್ದಾರೆ. ಈ ಸಂದರ್ಭದಲ್ಲಿ ಮೂರುವರೆ ಲೀಟರ್ ಲೀಟರ್ ಭಟ್ಟಿ ಸಾರಾಯಿ ಮತ್ತು ಭಟ್ಟಿ ಸಾರಾಯಿ ತಯಾರಿಕಾ ಸಾಮಾಗ್ರಿಗಳನ್ನು ಜಫ್ತಿ ಮಾಡಿ ಪ್ರಕರಣ ದಾಖಲಿಸಲಾಗಿದೆ.ದ.ಕ.ಜಿಲ್ಲಾ ಅಬಕಾರಿ ಡಿಸಿ ಶೈಲಜಾ ಕೋಟೆ, ಡಿವೈಎಸ್ಪಿ ಶಿವಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ವಲಯ 2ರ ಅಬಕಾರಿ ಇನ್ಸ್ಪೆಕ್ಟರ್ ರತ್ನಾಕರ ರೈಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಉಪನಿರೀಕ್ಷಕ ಆಶಿಸ್, ಸಿಬ್ಬಂದಿಗಳಾದ ಬಸವರಾಜತೋರೆ, ನವೀನ್ ನಾಯ್ಕ್ ಮತ್ತು ಚಾಲಕ ಹರಿಯಪ್ಪಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 