ಘರಾಣೆಯ ಭುಜಬಲಿ ದೇಸಾಯಿ ನಿಧನ
Bhujbali Desai
ಧಾರವಾಡ 27: ತಾಲೂಕಿನ ಅಮ್ಮಿನಬಾವಿ ಗ್ರಾಮದ ಸ್ವಾತಂತ್ರ್ಯಪೂರ್ವದ ಪಾರಂಪರಿಕ ದೇಶಗತಿ ಘರಾಣೆಯ ಯಜಮಾನ ಮತ್ತು ದಿಗಂಬರ ಜೈನ್ ಸಮಾಜದ ಮುಖಂಡ ಭುಜಬಲಿ ಬಲ್ಲಾಳರಾವ ದೇಸಾಯಿ (95) ಬುಧವಾರ ನಿಧನರಾದರು.
ಮೃತರು ಪತ್ನಿ, 5 ಜನ ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧಗಳನ್ನು ಅಗಲಿದ್ದಾರೆ. ಬುಧವಾರ ಅಮ್ಮಿನಬಾವಿಯಲ್ಲಿ ಗ್ರಾಮ ಪರಂಪರೆಯ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.
ಶೋಕ : ಅಮ್ಮಿನಬಾವಿ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯರು ಹಾಗೂ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯರು, ವರೂರು ನವಗ್ರಹ ತೀರ್ಥದ ಶ್ರೀಧರ್ಮಸೇನ ಭಟ್ಟಾರಕ ಪಟ್ಟದಾರ್ಯ ಸ್ವಾಮೀಜಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ವಿನಯ ಕುಲಕರ್ಣಿ, ಮಾಜಿ ಶಾಸಕರುಗಳಾದ ಎ.ಬಿ. ದೇಸಾಯಿ, ಅಮೃತ ದೇಸಾಯಿ, ಸೀಮಾ ಮಸೂತಿ, ಜೈನ್ ಸಮಾಜವೂ ಸೇರಿದಂತೆ ವಿವಿಧ ಕ್ಷೇತ್ರಗಳ ಅನೇಕ ಗಣ್ಯರು ತೀವ್ರ ಶೋಕವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 