ಬಸ್ಗೆ ಬೈಕ್ ಮುಖಾಮುಖಿ ಡಿಕ್ಕಿ: ವ್ಯಕ್ತಿಗೆ ಗಂಭೀರ ಗಾಯ
Bike collides head-on with bus: Person seriously injured
ಲೋಕದರ್ಶನ ವರದಿ
ಜಮಖಂಡಿ 19: ನಗರದ ವಿಜಯಪುರ ರಸ್ತೆಯ ಶಾಂತಿ ಬಾರ್ ಹತ್ತಿರ ಕೆಎಸ್ಆರ್ಟಿಸಿ ಬಸ್ಗೆ ಹಾಗೂ ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿಯೋರ್ವನು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಜಮಖಂಡಿಯಿಂದ ವಿಜಯಪುರ ಕಡೆಗೆ ಹೊರಟಿರುವ ಹುಬ್ಬಳ್ಳಿ, ವಿಜಯಪುರ ಬಸ್ ಹಾಗೂ ವಿಜಯಪುರ ಕಡೆಯಿಂದ ಜಮಖಂಡಿ ಕಡೆಗೆ ಬರುತ್ತಿರುವ ಬೈಕ್ ಸವಾರನಿಗೆ ಡಿಕ್ಕಿ ಹೊಡಿದಿದ್ದು. ಬೈಕ್ ಬಸ್ಸಿನ ಕೆಳಭಾಗಕ್ಕೆ ಸಿಲಿಕಿಕೊಂಡಿದ್ದು. ಬೈಕ್ ಸವಾರ ತಲೆಗೆ ಹೆಲ್ಮೇಟ್ ಧರಿಸಿದ ಕಾರಣ ಪ್ರಾಣಾಪಾಯದಿಂದ ಉಳಿದಿರುವ ಘಟನೆ ಸಂಭವಿಸಿದೆ.
ಬೈಕ್ ಸವಾರ ಅಥಣಿ ತಾಲೂಕಿನ ಸಂತಿಊರ ಗ್ರಾಮದ ಬಸವರಾಜ ಹನುಮಂತ ಮಡಿವಾಳರ (33) ಎಂದು ಗುರುತಿಸಲಾಗಿದೆ.
ಬೈಕ್ ಸವಾರ ತಲೆಗೆ ಹೆಲ್ಮೇಟ್ ಧರಿಸಿದ ಕಾರಣ ವ್ಯಕ್ತಿ ಬದುಕುಳಿದಿರುತ್ತಾನೆ. ಬಸವರಾಜ ಹನುಮಂತ ಮಡಿವಾಳರನಿಗೆ ಕೈ ಭಾಗಕ್ಕೆ ಹಾಗೂ ಕಾಲಿಗೆ ಗಂಭೀರವಾದ ಪೆಟ್ಟಾಗಿದ್ದು. 108 ವಾಹನದ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 