ಮಹಾಲಿಂಗೇಶ್ವರ ಸ್ವಾಮೀಜಿ ಜನ್ಮಶತಾಬ್ದಿ ಅಂಗವಾಗಿ ಅಯ್ಯಾಚಾರ
Birth centenary program of Mahalingeshwara Swamiji
ಲೋಕದರ್ಶನ ವರದಿ
ಮಹಾಲಿಂಗಪುರ 25: ‘ಪಟ್ಟಣದ ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಗುರುಲಿಂಗೇಶ್ವರ ಸ್ವಾಮೀಜಿ ಪುಣ್ಯಾರಾಧನೆ ಅಂಗವಾಗಿ ಮೇ 6 ರಂದು ಮಹಾಲಿಂಗೇಶ್ವರ ಸಂಸ್ಥಾನಮಠದಲ್ಲಿ ಜಂಗಮ ವಟುಗಳಿಗೆ ಅಯ್ಯಾಚಾರ, ಮಹಾಲಿಂಗೇಶ್ವರ ಸ್ವಾಮೀಜಿ ಜನ್ಮಶತಾಬ್ದಿ ಮತ್ತು ತುಲಾಭಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಗುರುಪಾದಯ್ಯ ಚಟ್ಟಿಮಠ ಹೇಳಿದರು.
ಈ ಕುರಿತು ಮಂಗಳವಾರ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿ ಅವರು ಮಾತನಾಡಿ, ‘ಅಂದು ಬೆಳಿಗ್ಗೆ 6 ಗಂಟೆಗೆ ಗುರುಲಿಂಗೇಶ್ವರ ಸ್ವಾಮೀಜಿ ಗದ್ದುಗೆಗೆ ರುದ್ರಾಭಿಷೇಕ, 7 ಗಂಟೆಗೆ ಜಂಗಮ ವಟುಗಳಿಗೆ ಅಯ್ಯಾಚಾರ ನಡೆಯಲಿದೆ. 10 ಗಂಟೆಗೆ ನಡೆಯುವ ಮಹಾಲಿಂಗೇಶ್ವರ ಸ್ವಾಮೀಜಿ ಜನ್ಮಶತಾಬ್ದಿ ಮತ್ತು ತುಲಾಭಾರ ಕಾರ್ಯಕ್ರಮದ ಸಾನಿಧ್ಯವನ್ನು ಚಿಪ್ಪಲಕಟ್ಟಿಯ ಸಿದ್ಧಲಿಂಗ ಶಿವಾಚಾರ್ಯರು ವಹಿಸುವರು. ಗುರುಪಾದಯ್ಯ ಚಟ್ಟಿಮಠ ಅಧ್ಯಕ್ಷತೆ ವಹಿಸುವರು ಎಂದರು.
ಸಮಾಜದ ಪ್ರಮುಖರಾದ ಮಹಾಂತೇಶ ಮನ್ನಯ್ಯನವರಮಠ, ಸಾಗರ ಮಠದ, ಬಸವರಾಜ ಹಿಟ್ಟಿನಮಠ, ಗುರುಲಿಂಗಯ್ಯ ಮಠಪತಿ, ಕುಮಾರ ಮನ್ನಯ್ಯನವರಮಠ, ಚನ್ನಯ್ಯ ಮಸಗುಪ್ಪಿಮಠ ಇದ್ದರು.
ಅಯ್ಯಾಚಾರ ಮಾಡಿಸುವವರು ಸಂಪರ್ಕಿಸುವ ಮೋಬೈಲ್ ನಂಬರ್ ಗಳು :9481010444,8618022827,9880076986,9845533416.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 