ನದಾಫ್ ಸಂಘದ ಸಂಸ್ಥಾಪಕರ ಜನ್ಮದಿನ ಆಚರಣೆ
Birthday celebration of the founder of Nadaf Association
ಲೋಕದರ್ಶನ ವರದಿ
ಮುದ್ದೇಬಿಹಾಳ 12: ಪಟ್ಟಣದ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ವತಿಯಿಂದ ವಿದ್ಯಾನಿಕೇತನ ಶಾಲೆಯಲ್ಲಿ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಪಿಂಜಾರ ರತ್ನ ದಿ. ಹಾಜಿ ಹೆಚ್. ಇಬ್ರಾಹಿಂ ಸಾಹೇಬರ ಜನ್ಮದಿನವನ್ನು ಸರಳವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಕ ಟಿ.ಎನ್. ರೂಡಗಿ, ಸಮಾಜವನ್ನು ಒಗ್ಗೂಡಿಸಿ ಸಂಘಟನೆಯ ಬಲವರ್ಧನೆಗೆ ಶ್ರಮಿಸಿದ ಹಾಜಿ ಇಬ್ರಾಹಿಂ ಸಾಹೇಬರು ಪ್ರವರ್ಗ-1 ಮೀಸಲಾತಿ ಸೌಲಭ್ಯ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದರು.ಸಂಘದ ತಾಲೂಕು ಘಟಕದ ಅಧ್ಯಕ್ಷ ಮಲಿಕಸಾಬ ನದಾಫ್, ಪ್ರಧಾನ ಕಾರ್ಯದರ್ಶಿ ಬಾಬು ದಿಡ್ಡಿಮನಿ, ಉಪಾಧ್ಯಕ್ಷರಾದ ಮಕ್ತುಮಸಾಬ ನದಾಫ್, ಮೌಲಾಸಾಬ ನದಾಫ್, ಲಾಡ್ಲೇಮಶಾಕ್ ನದಾಫ್, ಟಿ.ಎನ್. ರೂಡಗಿ, ಎನ್.ಬಿ. ಪಿಂಜಾರ, ದಾವಲಸಾಬ ವಾಲಿಕಾರ, ಹಸನಸಾಬ ಕವಡಿಮಟ್ಟಿ, ಬಾಬು ತಮದಡ್ಡಿ, ರಜಾಕ್ ಭೈರವಾಡಗಿ, ಹೆಚ್.ಐ. ಢವಳಗಿ, ಲಾಳೆಸಾಬ ದಿಡ್ಡಿಮನಿ ಹಾಗೂ ಅಬ್ದುಲ್ ರಜಾಕ್ ಮುದ್ನಾಳ ಉಪಸ್ಥಿತರಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ಬಾಬು ದಿಡ್ಡಿಮನಿ ಸ್ವಾಗತಿಸಿ, ವಂದಿಸಿದರು.
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ 