ನದಾಫ್ ಸಂಘದ ಸಂಸ್ಥಾಪಕರ ಜನ್ಮದಿನ ಆಚರಣೆ
Birthday celebration of the founder of Nadaf Association
ಲೋಕದರ್ಶನ ವರದಿ
ಮುದ್ದೇಬಿಹಾಳ 12: ಪಟ್ಟಣದ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ವತಿಯಿಂದ ವಿದ್ಯಾನಿಕೇತನ ಶಾಲೆಯಲ್ಲಿ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಪಿಂಜಾರ ರತ್ನ ದಿ. ಹಾಜಿ ಹೆಚ್. ಇಬ್ರಾಹಿಂ ಸಾಹೇಬರ ಜನ್ಮದಿನವನ್ನು ಸರಳವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಕ ಟಿ.ಎನ್. ರೂಡಗಿ, ಸಮಾಜವನ್ನು ಒಗ್ಗೂಡಿಸಿ ಸಂಘಟನೆಯ ಬಲವರ್ಧನೆಗೆ ಶ್ರಮಿಸಿದ ಹಾಜಿ ಇಬ್ರಾಹಿಂ ಸಾಹೇಬರು ಪ್ರವರ್ಗ-1 ಮೀಸಲಾತಿ ಸೌಲಭ್ಯ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದರು.ಸಂಘದ ತಾಲೂಕು ಘಟಕದ ಅಧ್ಯಕ್ಷ ಮಲಿಕಸಾಬ ನದಾಫ್, ಪ್ರಧಾನ ಕಾರ್ಯದರ್ಶಿ ಬಾಬು ದಿಡ್ಡಿಮನಿ, ಉಪಾಧ್ಯಕ್ಷರಾದ ಮಕ್ತುಮಸಾಬ ನದಾಫ್, ಮೌಲಾಸಾಬ ನದಾಫ್, ಲಾಡ್ಲೇಮಶಾಕ್ ನದಾಫ್, ಟಿ.ಎನ್. ರೂಡಗಿ, ಎನ್.ಬಿ. ಪಿಂಜಾರ, ದಾವಲಸಾಬ ವಾಲಿಕಾರ, ಹಸನಸಾಬ ಕವಡಿಮಟ್ಟಿ, ಬಾಬು ತಮದಡ್ಡಿ, ರಜಾಕ್ ಭೈರವಾಡಗಿ, ಹೆಚ್.ಐ. ಢವಳಗಿ, ಲಾಳೆಸಾಬ ದಿಡ್ಡಿಮನಿ ಹಾಗೂ ಅಬ್ದುಲ್ ರಜಾಕ್ ಮುದ್ನಾಳ ಉಪಸ್ಥಿತರಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ಬಾಬು ದಿಡ್ಡಿಮನಿ ಸ್ವಾಗತಿಸಿ, ವಂದಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 