ದಾನಗಳಲ್ಲಿ ರಕ್ತದಾನ ಶ್ರೇಷ್ಠ: ಡಾ. ನದಾಫ
ಲೋಕದರ್ಶ ವರದಿ
ಕಕ್ಕೇರಿ 26: ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿ ಆಗುವುದರ ಜೊತೆಗೆ ಶರೀರದಲ್ಲಿ ಚೈತನ್ಯ ವೃದ್ಧಿಯಾಗಿ ವ್ಯಕ್ತಿಯ ಕಾರ್ಯ ಚಟುವಟಿಕೆಗಳು ಚುರುಕಾಗುತ್ತವೆ ಹಾಗೂ ಜ್ಞಾಪಕ ಶಕ್ತಿ ಕೂಡ ಹೆಚ್ಚುತ್ತದೆ, ಹೃದಯಾಘಾತ ತಡೆಯಲು ಸಹಾಯವಾಗುತ್ತದೆ.
ಪುರುಷರು ಮೂರು ತಿಂಗಳಿಗೊಮ್ಮೆ ಮತ್ತು ಸ್ತ್ರೀಯರು ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದು ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಲೀಮಾ ನದಾಫ ಹೇಳಿದರು.
ಖಾನಾಪುರ ತಾಲೂಕಿನ ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತ ದಾನ ಶಿಬಿರದಲ್ಲಿ ಮಾತನಾಡುವ ಸಂದರ್ಭದಲ್ಲಿ ಅವರು ಹೇಳಿದರು.
ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾಥರ್ಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ಶಿಬಿರದಲ್ಲಿ ಬಹುಸಂಖ್ಯೆಯಲ್ಲಿ ಯುವಕರು ತುಂಬು ಉತ್ಸಾಹ ದಿಂದ ಭಾಗವಹಿಸಿದ್ದರು.ವೈದ್ಯಾಧಿಕಾರಿ ಡಾ. ಶ್ರೀದೇವಿ ದೊಂಬಾಡಿ, ಡಾ. ಪೂಜಾ ಸೇರಿದಂತೆ ಗ್ರಾ.ಪಂ ಸದಸ್ಯರು, ಆಶಾ ಕಾರ್ಯಕತರ್ೆಯರು, ಆರೋಗ್ಯ ಕಾರ್ಯಕತರ್ೆಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಈಶ್ವರ ಜಿ.ಸಂಪಗಾವಿ, ಕಕ್ಕೇರಿ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 