ದಾನಗಳಲ್ಲಿ ರಕ್ತದಾನ ಶ್ರೇಷ್ಠ: ಡಾ. ನದಾಫ
ಲೋಕದರ್ಶ ವರದಿ
ಕಕ್ಕೇರಿ 26: ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿ ಆಗುವುದರ ಜೊತೆಗೆ ಶರೀರದಲ್ಲಿ ಚೈತನ್ಯ ವೃದ್ಧಿಯಾಗಿ ವ್ಯಕ್ತಿಯ ಕಾರ್ಯ ಚಟುವಟಿಕೆಗಳು ಚುರುಕಾಗುತ್ತವೆ ಹಾಗೂ ಜ್ಞಾಪಕ ಶಕ್ತಿ ಕೂಡ ಹೆಚ್ಚುತ್ತದೆ, ಹೃದಯಾಘಾತ ತಡೆಯಲು ಸಹಾಯವಾಗುತ್ತದೆ.
ಪುರುಷರು ಮೂರು ತಿಂಗಳಿಗೊಮ್ಮೆ ಮತ್ತು ಸ್ತ್ರೀಯರು ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದು ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಲೀಮಾ ನದಾಫ ಹೇಳಿದರು.
ಖಾನಾಪುರ ತಾಲೂಕಿನ ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತ ದಾನ ಶಿಬಿರದಲ್ಲಿ ಮಾತನಾಡುವ ಸಂದರ್ಭದಲ್ಲಿ ಅವರು ಹೇಳಿದರು.
ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾಥರ್ಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ಶಿಬಿರದಲ್ಲಿ ಬಹುಸಂಖ್ಯೆಯಲ್ಲಿ ಯುವಕರು ತುಂಬು ಉತ್ಸಾಹ ದಿಂದ ಭಾಗವಹಿಸಿದ್ದರು.ವೈದ್ಯಾಧಿಕಾರಿ ಡಾ. ಶ್ರೀದೇವಿ ದೊಂಬಾಡಿ, ಡಾ. ಪೂಜಾ ಸೇರಿದಂತೆ ಗ್ರಾ.ಪಂ ಸದಸ್ಯರು, ಆಶಾ ಕಾರ್ಯಕತರ್ೆಯರು, ಆರೋಗ್ಯ ಕಾರ್ಯಕತರ್ೆಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಈಶ್ವರ ಜಿ.ಸಂಪಗಾವಿ, ಕಕ್ಕೇರಿ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 