ರಕ್ತದಾನಿಗಳ ದಿನ: ರಕ್ತದಾನ ಮಹತ್ವ ಸಾರಿದ ಯಡಿಯೂರಪ್ಪ
ಬೆಂಗಳೂರು, ಜೂ.14,ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಹಾರೈಸಿ, ರಕ್ತದಾನದ ಮಹತ್ವವನ್ನು ಸಾರಿದ್ದಾರೆ.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ವಿಶ್ವ ರಕ್ತದಾನಿಗಳ ದಿನದ ಶುಭಾಶಯಗಳು. ಅತ್ಯಗತ್ಯ ಸಂದರ್ಭಗಳಲ್ಲಿ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವಕ್ಕೆ ಆಸರೆಯಾಗೋಣ ಎಂದು ಹೇಳಿದ್ದಾರೆ.ಇನ್ನೊಬ್ಬರ ಜೀವ ಉಳಿಸುವ ರಕ್ತದಾನವೇ ಶ್ರೇಷ್ಠ ದಾನ. ರಕ್ತದಾನದ ಕುರಿತು ಅರಿವು ಮೂಡಿಸುವ, ರಕ್ತದಾನಿಗಳನ್ನು ಪ್ರೋತ್ಸಾಹಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸುರಕ್ಷಿತ ರಕ್ತ ಎಲ್ಲರಿಗೂ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುವ ಕುರಿತು ಪಣ ತೊಡೋಣ ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಕೋವಿಡ್ ಸೋಂಕಿನ ಸಂದರ್ಭದಲ್ಲಿ ನಿಯಮಿತ ರಕ್ತದಾನ ಮಾಡುವ ಮೂಲಕ ಜೀವಗಳನ್ನು ಉಳಿಸೋಣ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 