ಆದರ್ಶ ಶಿಕ್ಷಕರ ದೇಹದಾನ: ಸಮಾಜಕ್ಕೆ ಮಾದರಿಯಾದ ಕುಟುಂಬದ ಮಾನವೀಯ ನಿರ್ಧಾರ
Body Donation by an Exemplary Teacher: A Humanitarian Decision by a Family That Sets an Example for
ವಿಜಯಪುರ, ಆ. 3: ಜಿಲ್ಲೆಯಲ್ಲಿಯೇ ದೇಹದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಹೆಚ್ಚುತ್ತಿರುವ ಬೆನ್ನಲ್ಲೇ, ಇತ್ತೀಚೆಗೆ ನಿಧನರಾದ ಸಿಂದಗಿ ನಿವಾಸಿ ಹಾಗೂ ಆದರ್ಶ ಶಿಕ್ಷಕರಾದ ಹಣಮಂತರಾವ ತಮಾಜಿ ಕುಲಕರ್ಣಿ (77) ಅವರ ಪಾರ್ಥಿವ ಶರೀರವನ್ನು ಕುಟುಂಬಸ್ಥರು ಬಿ.ಎಲ್.ಡಿ.ಇ. ಆಸ್ಪತ್ರೆಗೆ ದೇಹದಾನ ಮಾಡುವ ಮೂಲಕ ಮಾನವೀಯ ಸಂದೇಶ ಸಾರಿದರು.
ಶಿಕ್ಷಣ ಕ್ಷೇತ್ರದಲ್ಲಿ ಅಕ್ಷರದಾಸೋಹದ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಬೆಳಕು ನೀಡಿದ್ದ ಹಣಮಂತರಾವ ಕುಲಕರ್ಣಿ ಅವರು ಸಮಾಜಮುಖಿ ಸೇವೆಯಿಂದ ಗುರುತಿಸಿಕೊಂಡಿದ್ದರು. ಅವರ ಅಂತಿಮ ಇಚ್ಛೆಗೆ ಗೌರವ ಸೂಚಿಸಿದ ಕುಟುಂಬ ಸದಸ್ಯರು ದೇಹದಾನದ ಮೂಲಕ ಮತ್ತೊಂದು ಸಾರ್ಥಕ ಸೇವೆ ಸಲ್ಲಿಸಿದರು.
ಶುಕ್ರವಾರ ಬಿ.ಎಲ್.ಡಿ.ಇ. ಆಸ್ಪತ್ರೆಗೆ ತರಲಾದ ಮೃತದೇಹವನ್ನು ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಆರ್. ಎಸ್. ಬುಲಗೌಡ ಅವರು ಸ್ವೀಕರಿಸಿದರು. ಈ ವೇಳೆ ಮೃತರ ಕುಟುಂಬ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ, ಸಮಾಜದಲ್ಲಿ ದೇಹದಾನದ ಬಗ್ಗೆ ಜಾಗೃತಿ ಹೆಚ್ಚುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.
ದೇಹದಾನವು ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನೆಗೆ ಅಮೂಲ್ಯ ಕೊಡುಗೆಯಾಗಿದ್ದು, ಇಂತಹ ಮಾನವೀಯ ನಿರ್ಧಾರಗಳು ಸಮಾಜಕ್ಕೆ ಮಾದರಿಯಾಗಲಿವೆ ಎಂದು ಅವರು ಅಭಿಪ್ರಾಯಪಟ್ಟರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 