ನಾಪತ್ತೆಯಾಗಿದ್ದ ವಕೀಲನ ಶವ ಕೃಷ್ಣಾ ನದಿಯಲ್ಲಿ ಪತ್ತೆ
Body of missing lawyer found in Krishna river
ಬೆಳಗಾವಿ 06 : ಕಳೆದ 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಥಣಿ ನ್ಯಾಯವಾದಿ ಸುಭಾಷ್ ಪಾಟಣಕರ(56) ಕೃಷ್ಣಾ ನದಿಯಲ್ಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಅಥಣಿ ತಾಲೂಕಿನ ಯಲ್ಲಮ್ಮವಾಡಿ ಗ್ರಾಮದ ನಿವಾಸಿಯಾದ ವಕೀಲ ಸುಭಾಷ್ ಅವರು ಡಿ. 3ರಂದು ನಾಪತ್ತೆಯಾಗಿದ್ದರು. ಈ ನಾಪತ್ತೆ ಪ್ರಕರಣ ಕುರಿತು ನಿನ್ನೆಯಷ್ಟೇ ವಕೀಲನ ಪತ್ತೆಗಾಗಿ ಆಗ್ರಹಿಸಿ ಪೋಲಿಸರ ವಿರುದ್ಧ ವಕೀಲರು ಸಹ ಪ್ರತಿಭಟನೆ ನಡೆಸಿದ್ದರು. ಆದರೆ ಇಂದು ಕೃಷ್ಣಾ ನದಿಯಲ್ಲಿ ವಕೀಲ ಸುಭಾಷ್ ಶವವಾಗಿ ಪತ್ತೆಯಾಗಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 