ಬೊಮ್ಮನಹಳ್ಳಿ ಪಿಕೆಪಿಎಸ್ ನೂತನ ಅಧ್ಯಕ್ಷ ಬಿರಾದಾರಗೆ ಸನ್ಮಾನ
Bommanahalli PKPS's new president, Biradara, is felicitated
ತಾಳಿಕೋಟಿ 07 : ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ನೂತನವಾಗಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಡಿವಾಳಪ್ಪ (ಮಡುಸೌಕಾರ) ಬಿರಾದಾರ ಇವರನ್ನು ಮಿಣಜಗಿ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಮಡುಸೌಕಾರ ಬಿರಾದಾರ ಅವರು ಇವತ್ತು ಸಂಘದ ಆಡಳಿತ ಮಂಡಳಿ ಸದಸ್ಯರ ಜೊತೆಗೆ ತಾವೆಲ್ಲರೂ ಸಹಕರಿಸಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದೀರಿ ನಿಮ್ಮ ಈ ಪ್ರೀತಿ ವಿಶ್ವಾಸಕ್ಕೆ ಚಿರಋಣಿಯಾಗಿರುವೆ. ನನ್ನ ಈ ಅವಧಿಯಲ್ಲಿ ಸಂಘದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದರು. ಈ ಸಮಯದಲ್ಲಿ ಗಣ್ಯರಾದ ಗುರ್ಪಗೌಡ ಪಾಟೀಲ, ಶ್ರೀಶೈಲ್ ವಜ್ಜಲ,ಜಿ.ಬಿ.ಪಾಟೀಲ, ಗೊಟಖಂಡಕಿ ಎಸ್ಡಿಎಂಸಿ ಅಧ್ಯಕ್ಷ ಬಸನಗೌಡ ಬಿರಾದಾರ, ಮಹಾಂತೇಶ ಬಿರಾದಾರ, ಶರಣಗೌಡ ಬಿರಾದಾರ, ಗೀರೀಶ ತಳವಾರ ಹಾಗೂ ಬಸನಗೌಡ ಬಿರಾದಾರ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 