ಬೊನಲು ಉತ್ಸವ: ತೆಲಂಗಾಣ ಮುಖ್ಯಮಂತ್ರಿ ಭೇಟಿ
ಹೈದರಾಬಾದ್: ಬೊನಲು ಉತ್ಸವದ ಪ್ರಯುಕ್ತ ಸಿಕಂದರಾಬಾದ್ ನಲ್ಲಿರುವ ಪ್ರಖ್ಯಾತ ಉಜ್ಜೈನಿ ಮಹಾಂಕಾಳಿ ದೇವಸ್ಥಾನಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಭಾನುವಾರ ಭೇಟಿ ನೀಡಿದರು
ಕೇಂದ್ರ ಗೃಹ ಖಾತೆ ರಾಜ್ಯಸಚಿವ ಜಿ ಕಿಷನ್ ರೆಡ್ಡಿ, ತೆಲಂಗಾಣ ಸಚಿವ ಟಿ ಶ್ರೀನಿವಾಸ ಯಾದವ್, ಮಾಜಿ ಸಚಿವ ಬಂಡಾರು ದತ್ತಾತ್ರೇಯ ಮತ್ತಿತರು ಮುಖ್ಯಮಂತ್ರಿಯವರ ಜೊತೆಗೂಡಿ ದೇವಿಯ ದರ್ಶನ ಪಡೆದರು.
ಮಹಾಂಕಾಳಿಯ ದರ್ಶನಕ್ಕಾಗಿ ಮಹಾರಾಷ್ಟ್ರ ಹಾಗೂ ತೆಲಂಗಾಣದ ವಿವಿಧ ಭಾಗಗಳಿಂದ 3 ಲಕ್ಷಕ್ಕೂ ಅಧಿಕ ಜನರು ಆಗಮಿಸಿದ್ದರು. ಇಷ್ಟಾರ್ಥ ಸಿದ್ಧಿಗಾಗಿ ಮಹಿಳೆಯರು ಮಣ್ಣಿನ ಮಡಿಕೆಯಲ್ಲಿ ಅಕ್ಕಿ, ಹಾಲು, ಬೆಲ್ಲ ಸೇರಿದ ಮಾಡಿದ ನೈವೇದ್ಯವನ್ನು ತಯಾರಿಸಿ ದೇವಿಗೆ ಸಮರ್ಪಿಸುವುದು ಈ ಉತ್ಸವದ ವಿಶೇಷ.
ಲಕ್ಷಾಂತರ ಜನರು ಭೇಟಿ ನೀಡುವ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆಗೆ ಅವಕಾಶವಾಗದಂತೆ ದೇಗುಲದ ಬಳಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪ್ರತಿವರ್ಷ ಜುಲೈ-ಆಗಸ್ಟ್ ತಿಂಗಳಿನ ಆಷಾಢ ಮಾಸದಲ್ಲಿ ಬೊನಲು ಉತ್ಸವ ಆಚರಿಸಲಾಗುತ್ತದೆ. ಈ ಬಾರಿ ಜುಲೈ 7ರಿಂದ ಪ್ರಾರಂಭವಾಗಿರುವ ಉತ್ಸವ ಜುಲೈ 28ರಂದು ಮುಕ್ತಾಯವಾಗಲಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 