ಕಂಕಣ ಸೂರ್ಯಗ್ರಹಣ : ನೋವು ತೋಡಿಕೊಂಡ ಪ್ರಧಾನಿ
ನವದೆಹಲಿ, ಡಿ 26 ವಿಶ್ವದ ನಾನಾಕಡೆ ಹಲವಡೆ ಗುರುವಾರ ಬೆಳಗ್ಗೆ ಕಂಕಣ
ಸೂರ್ಯಗ್ರಹಣ ಗೋಚರಿಸಿದೆ, ಆದರೆ ಗ್ರಹಣವನ್ನು ಸರಿಯಾಗಿ ನೋಡಲು ಸಾಧ್ಯವಾಗಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ನೋವು, ಅಳಲು
ತೋಡಿಕೊಂಡಿದ್ದಾರೆ. ಆಸ್ಟ್ರೇಲಿಯಾ,ಸೌದಿ,
ಅಬುದಾಬಿ, ಕತಾರ್ , ಫಿಲಿಪ್ಪೆನ್ಸ್ , ಚೀನಾ, ಇಂಡೋನೇಷ್ಯಾ, ಸೋಮಾಲಿಯಾ, ಶ್ರೀಲಂಕಾ, ಜಿಂಬಾಬ್ವೆ,
ಪೊಲೆಂಡ್, ಬಾಂಗ್ಲಾದೇಶ, ಮಲೇಷ್ಯಾ, ಭೂತಾನ್ , ಅಫ್ಘಾನಿಸ್ತಾನ, ಮಾರಿಷಸ್, ಸುಮಾತ್ರ, ಬೆಲಾರಸ್ ಮತ್ತಿತರ
ರಾಷ್ಟ್ರಗಳಲ್ಲೂ ಗ್ರಹಣ ಗೋಚರಿಸಿದೆ.ದೇಶದ ಕೊಚ್ಚಿ,
ಕಾಸರಗೋಡು, ತಿರುವನಂತಪುರ, ಹರಿದ್ವಾರ ಚಂಡಿಗಡ, ಚೆನ್ನೈ, ಅಹ್ಮದಾಬಾದ್, ಅಜ್ಮೀರ್, ಭುವನೇಶ್ವರ್, ಮುಂಬೈನಲ್ಲೂ ಸೂರ್ಯಗ್ರಹಣ ಕಾಣಿಸಿದೆ..ದೆಹಲಿ ಮತ್ತು
ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣದ ಕಾರಣದಿಂದಾಗಿ ಕಂಕಣ ಸೂರ್ಯಗ್ರಹಣ ವೀಕ್ಷಣೆಗೆ ಅಡ್ಡಿಯಾಗಿತ್ತು. ಸೂರ್ಯಗ್ರಹಣ ಆರಂಭದಲ್ಲಿ ಕೇರಳ, ತಮಿಳುನಾಡು,
ಕರ್ನಾಟಕದ ಕೆಲವು ನಗರಗಳಲ್ಲಿ ಗೋಚರಿಸಿತು.ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಂಕಣ ಸೂರ್ಯಗ್ರಹಣ
ವೀಕ್ಷಿಸಿದರು. " ಭಾರತದ ಎಲ್ಲರಂತೆ ನಾನು ಕೂಡಾ ಗ್ರಹಣ ವೀಕ್ಷಿಸಲು ಉತ್ಸುಕನಾಗಿದ್ದೆ. ದುರದೃಷ್ಟವಶಾತ್,
ಮೋಡದ ಕವಿದ ವಾತಾವರಣದಿಂದ ಸೂರ್ಯಗ್ರಹಣ ಸರಿಯಾಗಿ
ನೋಡಲು ಸಾಧ್ಯವಾಗಲಿಲ್ಲ ಎಂದು ಅವರು ನೋವು ತೋಡಿಕೊಂಡಿದ್ದಾರೆ.
ಬೇರೆ ಪ್ರದೇಶಗಳ ಗ್ರಹಣದ ನೇರ ಪ್ರಸಾರವನ್ನು ನೋಡಿ,
ಖಗೋಳ ಶಾಸ್ತ್ರಜ್ಞರೊಂದಿಗೆ ಇದರ ಬಗ್ಗೆ ಮಾಹಿತಿ ಪಡೆದಿರುವುದಾಗಿ ಪ್ರಧಾನಿ
ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 